ಗೋರಖ್'ಪುರದಲ್ಲಿ ಮತ್ತೆ ಸಾವಿನ ರುದ್ರನರ್ತನ; 3 ದಿನದಲ್ಲಿ 61 ಮಕ್ಕಳು ಸಾವು
ಮೂರು ವಾರಗಳ ಹಿಂದೆ ಆಕ್ಸಿಜನ್ ಸಿಲಿಂಡರ್ ಪೂರೈಕೆಯ ಕೊರತೆಯಿಂದ ಸುಮಾರು 70 ಮಕ್ಕಳು ಸಾವನಪ್ಪಿದ ಘಟನೆ ಇನ್ನೂ ಹಸಿಯಿರುವಾಗಲೇ, ಉತ್ತರ ಪ್ರದೇಶ ಗೋರಖ್'ಪುರದ ಬಿಆರ್'ಡಿ ಆಸ್ಪತ್ರೆಯಲ್ಲಿ ಸಾವಿನ ರುದ್ರ ನರ್ತನ ಮುಂದುವರೆದಿದೆ.
ಗೋರಖ್'ಪುರ, ಉತ್ತರ ಪ್ರದೇಶ: ಮೂರು ವಾರಗಳ ಹಿಂದೆ ಆಕ್ಸಿಜನ್ ಸಿಲಿಂಡರ್ ಪೂರೈಕೆಯ ಕೊರತೆಯಿಂದ ಸುಮಾರು 70 ಮಕ್ಕಳು ಸಾವನಪ್ಪಿದ ಘಟನೆ ಇನ್ನೂ ಹಸಿಯಿರುವಾಗಲೇ, ಉತ್ತರ ಪ್ರದೇಶ ಗೋರಖ್'ಪುರದ ಬಿಆರ್'ಡಿ ಆಸ್ಪತ್ರೆಯಲ್ಲಿ ಸಾವಿನ ರುದ್ರ ನರ್ತನ ಮುಂದುವರೆದಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕ್ಷೇತ್ರವಾಗಿರುವ ಗೋರಖ್'ಪುರದ ಈ ಬಿಆರ್'ಡಿ ಆಸ್ಪತ್ರೆಯಲ್ಲಿ ಕಳೆದ 72 ಗಂಟೆಗಳಲ್ಲಿ 61 ಮಕ್ಕಳು ಮೃತಪಟ್ಟಿದ್ದಾರೆಂದು ವರದಿಯಾಗಿದೆ.
ಈ ಬಾರಿ ಮಕ್ಕಳ ಸಾವಿಗೆ ಕಾರಣ ಬೇರೆಯಾಗಿದೆ. ಎನ್ಸಿಪಾಲಿಟಿ, ನಿಮೋನಿಯಾ, ಸೆಪ್ಸಿಸ್ ಹೀಗೆ ವಿವಿಧ ಬಗೆಯ ಕಾಯಿಲೆಗಳಿಂದ ಮಕ್ಕಳು ಸಾವನಪ್ಪಿದ್ದಾರೆಂದು ಹೇಳಲಾಗಿದೆ.
ಇನ್ನೊಂದು ವರದಿಯ ಪ್ರಕಾರ ಆಗಸ್ಟ್ ತಿಂಗಳಿನಲ್ಲಿ ಮಕ್ಕಳ ಸಾವಿನ ಸಂಖ್ಯೆ 290ಕ್ಕೆ ತಲುಪಿದೆ. ಅವುಗಳಲ್ಲಿ 213 ಮಕ್ಕಳು ನಿಯೋ-ನೇಟಲ್ ಐಸಿಯುನಲ್ಲಿ ಮೃತಪಟ್ಟಿದ್ದರೆ, 77 ಮಕ್ಕಳು ಎನ್ಸಿಪಾಲಿಟಿ ವಿಭಾಗದಲ್ಲಿ ಮೃತಪಟ್ಟಿದ್ದಾರೆಂದು ಬಿಆರ್'ಡಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಪಿ.ಕೆ.ಸಿಂಗ್ ಹೇಳಿದ್ದಾರೆ.
ಈ ವರ್ಷದಲ್ಲಿ ಒಟ್ಟು 1250 ಮಕ್ಕಳು ಈ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಪಿಟಿಐ ವರದಿ ಮಾಡಿದೆ.
(ಸಾಂದರ್ಭಿಕ ಚಿತ್ರ)