ಜೆಡಿಎಸ್‌ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿರುವ ಸಾಲ ಮನ್ನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಸಹಕಾರ ಕೊಡುತ್ತದೆ. ಆದರೆ, ಸಾಲ ಮನ್ನಾ ಮಾಡಲು ಗಡುವು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ .ಪರಮೇಶ್ವರ್‌ ಹೇಳಿದ್ದಾರೆ.

ಬೆಂಗಳೂರು : ಜೆಡಿಎಸ್‌ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿರುವ ಸಾಲ ಮನ್ನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಸಹಕಾರ ಕೊಡುತ್ತದೆ. ಆದರೆ, ಸಾಲ ಮನ್ನಾ ಮಾಡಲು ಗಡುವು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ .ಪರಮೇಶ್ವರ್‌ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಗುರುವಾರ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮನ್ನಾ ಸೇರಿದಂತೆ ಎರಡೂ ಪಕ್ಷಗಳ ಪ್ರಣಾಳಿಕೆಯಲ್ಲಿನ ಸಾಮಾನ್ಯ ಕಾರ್ಯಕ್ರಮಗಳ ಜಾರಿ ಕುರಿತು ಕಾರ್ಯಸೂಚಿ ರಚಿಸಲಾಗುವುದು. ಬಳಿಕ ಕಾರ್ಯಕ್ರಮಗಳನ್ನು ಮೈತ್ರಿ ಸರ್ಕಾರದ ವತಿಯಿಂದ ಅನುಷ್ಠಾನಗೊಳಿಸಲಾಗುವುದು ಎಂದರು.

ಈ ವೇಳೆ ಸಾಲ ಮನ್ನಾಗೆ ವಿರೋಧ ಪಕ್ಷಗಳು ಗಡುವ ವಿಧಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಾಲಮನ್ನಾ ವಿಚಾರವಾಗಿ ಗಡುವು ವಿಧಿಸಲು ಸಾಧ್ಯವಿಲ್ಲ . ಸಾವಿರಾರು ಕೋಟಿ ರು. ವ್ಯವಹಾರ ವಾಗಿರುವುದರಿಂದ ಅದರ ಪ್ರಕ್ರಿಯೆಗೆ ಕಾಲಾವಕಾಶ ಬೇಕಾಗುತ್ತದೆ. ಪ್ರಸ್ತುತ ಯಾವ ರೀತಿಯಲ್ಲಿ ಸಾಲ ಮನ್ನಾ ಮಾಡಬಹುದು ಎಂಬುದನ್ನು ಪರಿಶೀಲಿಸಲು ಹಣಕಾಸು ಇಲಾಖೆಗೆ ವಹಿಸಿದ್ದು, ಅವರು ಈ ಬಗ್ಗೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಗಡುವು ವಿಧಿಸುವುದು ಸರಿಯಲ್ಲ ಎಂದು ಹೇಳಿದರು.

ಅಲ್ಲದೆ, ಸಮನ್ವಯ ಸಮಿತಿಯಲ್ಲಿ ಹಿಂದಿನ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಮುಂದುವರೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳಿಗೆ ಸಮಸ್ಯೆ ಇಲ್ಲ ಎಂದರು.