Asianet Suvarna News Asianet Suvarna News

ಜಾರಕಿಹೊಳಿ ಬ್ರದರ್ಸ್‌ಗೆ ಎಚ್ಚರಿಕೆಯ ಸಂದೇಶ ರವಾನಿಸಿದ ಪರಂ

 ಜಾರಕಿಹೊಳಿ ಬ್ರದರ್ಸ್ ಬೆಳವಣಿಗೆಯ ಕುರಿತು ಕೆಲ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದಂತೂ ಸತ್ಯ. ಇದಕ್ಕೆ ಪೂರಕವೆಂಬಂತೆ ರಮೇಶ್ ಹಾಗೂ ಸತೀಶ್ ಜಾರಕಿಹೊಳಿ ಅವರಿಂದ ಕಳೆದೊಂದು ವಾರದಿಂದ ರಾಜ್ಯದಲ್ಲಿ ನಡೆಯುತ್ತಿರುವ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಕುರಿತು ಉಪಮುಖ್ಯಂತ್ರಿ ಡಾ,ಜಿ, ಪರಮೇಶ್ವರ್ ಕೆಂಡಾಮಂಡಲರಾಗಿದ್ದಾರೆ.

Parameshwara warns Jarkiholi brothers for dissident activities
Author
Bengaluru, First Published Sep 13, 2018, 3:42 PM IST

ಬೆಂಗಳೂರು, (ಸೆ.13): ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯುರೋಪ್ ಪ್ರವಾಸದಲ್ಲಿರುವ ಸಮಯದಲ್ಲಿ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಣ ಗೆದ್ದು, ಜಾರಕಿಹೊಳಿ ಬ್ರದರ್ಸ್ ಗೆ ಮುಖಭಂಗವಾದ ನಂತರ ಕರ್ನಾಟಕ ರಾಜಕೀಯದ ಚಿತ್ರಣ ಅಲ್ಲಾಡುತ್ತಿದೆ.

 ಜಾರಕಿಹೊಳಿ ಬ್ರದರ್ಸ್ ಬೆಳವಣಿಗೆಯ ಕುರಿತು ಕೆಲ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದಂತೂ ಸತ್ಯ. ಇದಕ್ಕೆ ಪೂರಕವೆಂಬಂತೆ ರಮೇಶ್  ಹಾಗೂ ಸತೀಶ್ ಜಾರಕಿಹೊಳಿ ಅವರಿಂದ ಕಳೆದೊಂದು ವಾರದಿಂದ ರಾಜ್ಯದಲ್ಲಿ ನಡೆಯುತ್ತಿರುವ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಕುರಿತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಕೆಂಡಾಮಂಡಲರಾಗಿದ್ದಾರೆ. "

ಸದ್ಯ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚಿಸಲು ಪರಂ, ಗುರುವಾರ  ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಪರಮೇಶ್ವರ, ಇಂಥಾ ಏಳು-ಬೀಳುಗಳನ್ನ ಕಾಂಗ್ರೆಸ್​ ಸಾಕಷ್ಟು ನೋಡಿದೆ. ತಮ್ಮ ಕ್ಷೇತ್ರದ ಬಗ್ಗೆ ಇರುವ ಭಿನ್ನಾಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಲಿ. ಭಿನ್ನಮತಕ್ಕೆ ಕಡಿವಾಣ ಹಾಕುತ್ತೇವೆ  ಅದನ್ನು ಬಿಟ್ಟು  ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ನಡೆದುಕೊಳ್ಳಬಾರದು.ಇದ್ಯಾವುದು ನಡೆಯಲ್ಲ ಎಂದು ಪರಂ ಜಾರಕಿಹೊಳಿ ಸಹೋದರರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

Follow Us:
Download App:
  • android
  • ios