ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳನ್ನು ನಾಳೆಗೆ ಮುಂದೂಡಲಾಗಿದೆ. ಜಯಾ ನಿಧನದ ಹಿನ್ನೆಲೆಯಲ್ಲಿ ಕೆಂದ್ರ ಸರ್ಕಾರ ಈಗಾಗಲೇ ಒಂದು ದಿನದ ಶೋಕಾಚರಣೆ ಘೋಷಿಸಿ

ನವದೆಹಲಿ (ಡಿ.06): ನಿನ್ನೆ ರಾತ್ರಿ ಕೊನೆಯುಸಿರೆಳೆದ ತಮಿಳುನಾಡು ಮುಖ್ಯಮಂತ್ರಿ ಜಯಾಲಲಿತಾ ಅವರಿಗೆ ಸಂಸತ್ತಿನಲ್ಲಿಂದು ಶ್ರದ್ದಾಂಜಲಿ ಸಲ್ಲಿಸಲಾಯಿತು. ಬಳಿಕ ಇಂದಿನ ಸಂಸತ್ತು ಕಲಾಪಗಳನ್ನು ಮುಂದೂಡಲಾಯಿತು.

Add Asianetnews Kannada as a Preferred SourcegooglePreferred

ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳನ್ನು ನಾಳೆಗೆ ಮುಂದೂಡಲಾಗಿದೆ. ಜಯಾ ನಿಧನದ ಹಿನ್ನೆಲೆಯಲ್ಲಿ ಕೆಂದ್ರ ಸರ್ಕಾರ ಈಗಾಗಲೇ ಒಂದು ದಿನದ ಶೋಕಾಚರಣೆ ಘೋಷಿಸಿದೆ.

ತಮಿಳುನಾಡು ಸರ್ಕಾರ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ 3 ದಿನ ರಜೆ ಘೋಷಿಸಿದೆ ಹಾಗೂ ರಾಜ್ಯದಲ್ಲಿ 7 ದಿನ ಶೋಕಾಚರಣೆ ನಡೆಯಲಿದೆ.

ಕರ್ನಾಟಕ ಸೇರಿದಂತೆ, ಪಕ್ಕದ ಪಾಂಡಿಚೇರಿ, ಕೇರಳ, ಉತ್ತರಾಖಂಡ ಹಾಗೂ ಬಿಹಾರ ರಾಜ್ಯಗಳೂ ಒಂದು ದಿನದ ಶೋಕಾಚರಣೆಯನ್ನು ಆಚರಿಸುತ್ತಿವೆ.