8 ಜನ ಭಿನ್ನಮತೀಯ ಜೆಡಿಎಸ್ ಶಾಸಕರ ವಿರುದ್ಧ ಅನರ್ಹತೆಯ ದೂರಿನ ವಿಚಾರಣೆ ಮುಂದುವರಿದಿರುವಾಗಲೇ ರೆಬೆಲ್​ ಶಾಸಕರಿಗೆ ಹೊಸ ರಾಜಕೀಯದ ಆಫರ್​ ಸಿಕ್ಕಿದೆ. ಬಂಡಾಯ ಶಾಸಕರ ಮೇಲೆ ಕಣ್ಣು ಹಾಕಿರುವ ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ ರಾಜ್ಯದಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷವನ್ನು ಬಲವರ್ಧನೆಗೊಳಿಸುವ ಆಹ್ವಾನ ನೀಡಿದ್ದಾರೆ. ಈಗಾಗಲೇ ಶರದ್​ ಪವಾರ್​ ಜೊತೆ ಶಾಸಕ ಜಮೀರ್​ ಅಹಮದ್​ ಒಂದು ಬಾರಿ ಮುಂಬೈನಲ್ಲಿ ಮಾತುಕತೆಯನ್ನೂ ಮುಗಿಸಿದ್ದಾರೆ. ಜೊತೆಗೆ  ಬೆಂಗಳೂರಿಗೆ ಬಂದಾಗ 8 ಜನ ಅಮಾನತುಗೊಂಡ ಶಾಸಕರ ಜೊತೆ ಮಾತುಕತೆ ನಡೆಸುವ ಇಂಗಿತವನ್ನು ಪವಾರ್​ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು(ಅ.28): ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪರ ಮತ ಚಲಾಯಿಸಿ ಪಕ್ಷದಿಂದ ಅಮಾನತುಗೊಂಡಿರುವ 8 ಜನ ಬಂಡಾಯ ಶಾಸಕರಿಗೆ ಹೊಸ ರಾಜಕೀಯ ಆಫರ್​ ಒಂದು ಸಿಕ್ಕಿದೆ. ಈಗಾಗಲೇ ಒಂದು ಹಂತದ ಮಾತುಕತೆ ಮುಗಿದಿದ್ದು, ದೀಪಾವಳಿ ಹಬ್ಬದ ಬಳಿಕ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಹೆಚ್ಚಿದೆ. ಯಾವ ಪಕ್ಷದಿಂದ ಅಂತೀರಾ? ಹಾಗಾದ್ರೆ ಈ ಸ್ಟೋರಿ ಓದಿ

ರೆಬೆಲ್​ ಶಾಸಕರ ಮೇಲೆ ಪವಾರ್ ಕಣ್ಣು !: ರಾಜ್ಯದಲ್ಲಿ ಎನ್​ಸಿಪಿ ಬಲವರ್ಧನೆಯ ಆಫರ್​ !

8 ಜನ ಭಿನ್ನಮತೀಯ ಜೆಡಿಎಸ್ ಶಾಸಕರ ವಿರುದ್ಧ ಅನರ್ಹತೆಯ ದೂರಿನ ವಿಚಾರಣೆ ಮುಂದುವರಿದಿರುವಾಗಲೇ ರೆಬೆಲ್​ ಶಾಸಕರಿಗೆ ಹೊಸ ರಾಜಕೀಯದ ಆಫರ್​ ಸಿಕ್ಕಿದೆ. ಬಂಡಾಯ ಶಾಸಕರ ಮೇಲೆ ಕಣ್ಣು ಹಾಕಿರುವ ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ ರಾಜ್ಯದಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷವನ್ನು ಬಲವರ್ಧನೆಗೊಳಿಸುವ ಆಹ್ವಾನ ನೀಡಿದ್ದಾರೆ. ಈಗಾಗಲೇ ಶರದ್​ ಪವಾರ್​ ಜೊತೆ ಶಾಸಕ ಜಮೀರ್​ ಅಹಮದ್​ ಒಂದು ಬಾರಿ ಮುಂಬೈನಲ್ಲಿ ಮಾತುಕತೆಯನ್ನೂ ಮುಗಿಸಿದ್ದಾರೆ. ಜೊತೆಗೆ ಬೆಂಗಳೂರಿಗೆ ಬಂದಾಗ 8 ಜನ ಅಮಾನತುಗೊಂಡ ಶಾಸಕರ ಜೊತೆ ಮಾತುಕತೆ ನಡೆಸುವ ಇಂಗಿತವನ್ನು ಪವಾರ್​ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬಹುತೇಕ ದೀಪಾವಳಿ ಹಬ್ಬದ ಬಳಿಕ ಈ ಪ್ರಕ್ರಿಯೆಗೆ ವೇಗ ದೊರಕಲಿದೆ. ಶೀಘ್ರವೇ ಬೆಂಗಳೂರಿಗೆ ಬರಲಿರುವ ಶರದ್​ ಪವಾರ್​ ಜೊತೆ ಬಂಡಾಯ ಶಾಸಕರು ಮಾತುಕತೆ ನಡೆಸಲಿದ್ದಾರೆ. ಎಲ್ಲವೂ ಸಹಮತಕ್ಕೆ ಬಂದಲ್ಲಿ 8 ಬಂಡಾಯ ಶಾಸಕರು ರಾಜ್ಯದಲ್ಲಿ ಎನ್​ಸಿಪಿ ಪಕ್ಷವನ್ನು ಬಲವರ್ಧಿಸುವ ಕೆಲಸಕ್ಕೆ ಮುಂದಾಗುವ ಸಾಧ್ಯತೆಯಿದೆ. ಆದರೆ ಯಾವುದೇ ನೆಲೆ ಇಲ್ಲದ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷಕ್ಕೆ ನೆಲೆ ಕಾಣಿಸುವುದು ಸದ್ಯದ ರಾಜ್ಯ ರಾಜಕೀಯ ಪರಿಸ್ಥಿತಿಯಲ್ಲಿ ಕಷ್ಟದ ಮಾತಾಗಿದೆ.

ಹಾಗಂತ ರಾಜ್ಯದಲ್ಲಿ ಎನ್​ಸಿಪಿ ಕಟ್ಟುವ ಮಾತು ಕೇಳಿ ಬಂದಿರುವುದು ಇದೇ ಮೊದಲ ಬಾರಿಯೇನಲ್ಲ. ಈ ಹಿಂದೊಮ್ಮೆ ಅಫ್ಜಲ್​ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್​ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಎನ್​ಸಿಪಿಗೆ ವಲಸೆ ಹೊರಟು ನಿಂತಿದ್ದರು. ಆದರೆ ಅದು ಕೊನೆಯ ಕ್ಷಣದಲ್ಲಿ ವರ್ಕೌಟ್ ಆಗಿರಲಿಲ್ಲ. ಇದೀಗ ಮತ್ತೆ ಬಂಡಾಯ ಶಾಸಕರನ್ನು ಸೆಳೆಯಲು ಎನ್​ಸಿಪಿ ಮುಂದಾಗಿದ್ದು ಎಷ್ಟರ ಮಟ್ಟಿಗೆ ಫಲ ಕೊಡುತ್ತದೋ ಗೊತ್ತಿಲ್ಲ.