ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಮನೆ ಮೇಲೆ ನಿನ್ನೆ ರಾತ್ರಿ ಕೆಲ‌ ದುಷ್ಕರ್ಮಿಗಳು ಬಿಯರ್ ಬಾಟಲ್  ಮತ್ತು ಮಾಂಸದ ತುಂಡುಗಳನ್ನ ಎಸೆದು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.  

ಬೆಂಗಳೂರು(ಸೆ.16): ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಮನೆ ಮೇಲೆ ನಿನ್ನೆ ರಾತ್ರಿ ಕೆಲ‌ ದುಷ್ಕರ್ಮಿಗಳು ಬಿಯರ್ ಬಾಟಲ್ ಮತ್ತು ಮಾಂಸದ ತುಂಡುಗಳನ್ನ ಎಸೆದು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿನ್ನೆ ರಾತ್ರಿ ೧೧ ಗಂಟೆ ಸುಮಾರಿಗೆ ಬೈಕ್'ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ವೆಸಗಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಕೃತ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದು , ಸ್ಥಳಕ್ಕೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆನಂದ ಗುರೂಜಿ ಖಾಸಗಿ ಕಾರ್ಯಕ್ರಮದಲ್ಲಿ ಗೋ ಹತ್ಯೆ ಬಗ್ಗೆ ಪ್ರವಚನ ನೀಡಿದ್ದ ಹಿನ್ನೆಲೆಯಲ್ಲಿ‌ ಈ ಕೃತ್ಯವೆಸಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಸದ್ಯಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.