ಉಡುಪಿ ಮಠದಲ್ಲಿ ಇಫ್ತಾರ್ ಕೂಟ ಆಯೋಜನೆ ವಿಚಾರಪ್ರವಾಸದ ಪರಿಣಾಮ ಇಫ್ತಾರ್ ಆಯೋಜನೆ ಸಾಧ್ಯವಾಗಲಿಲ್ಲತುಮಕೂರಿನಲ್ಲಿ ಪೇಜಾವರ ಶ್ರೀ ಸ್ಪಷ್ಟನೆಮೋದಿ ಸರ್ಕಾರ ಟೀಕೆ ಮಾಡಿಲ್ಲ ಎಂದ ಶ್ರೀಗಳುಸರ್ವ ಪಕ್ಷಗಳ ಆಡಳಿತಕ್ಕೆ ಪೇಜಾವರ ಶ್ರೀಗಳ ಒಲವು   

ತುಮಕೂರು(ಜೂ.9): ಉಡುಪಿ ಮಠದಲ್ಲಿ ಇಫ್ತಾರ್ ಕೂಟ ಆಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ, ಈ ಬಾರಿ ತಾವು ಪ್ರವಾಸದಲ್ಲಿ ನಿರತವಾಗಿದ್ದರಿಂದ ಇಫ್ತಾರ್ ಕೂಟ ಆಯೋಜನೆ ಮಾಡಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಉಡುಪಿ ಮಠದಲ್ಲಿ ಕಳೆದ ಬಾರಿಯೂ ಕೂಡ ಇಫ್ತಾರ್ ಆಯೋಜನೆ ಮಾಡಲಾಗಿತ್ತು. ಆದರೆ ಈ ಬಾರಿ ಮಠದಲ್ಲಿ ಇಫ್ತಾರ್ ಕೂಟ ಆಯೋಜನೆಗೆ ಮುಸ್ಲಿಂ ಬಾಂಧವರಲ್ಲಿ ಆಸಕ್ತಿ ಇರಲಿಲ್ಲ ಎಂದು ಪೇಜಾವರ ಶ್ರೀ ಹೇಳಿದ್ದಾರೆ. ಕಳೆದ ಬಾರಿ ದೇವರ ಮೂರ್ತಿ ಇರುವ ಕೊಠಡಿಯಲ್ಲಿ ಇಫ್ತಾರ್ ಆಯೋಜನೆ ಮಾಡಿದ್ದಾರೆ ಎಂದ ಅಪನಂಬಿಕೆ ಅವರಲ್ಲಿ ಇದೆ. ಆದರೆ ಇಫ್ತಾರ್ ಆಯೋಜಿಸಿದ್ದ ಕೋಣೆಯಲ್ಲಿ ದೇವರ ಮೂರ್ತಿ ಇರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತಾವು ಟೀಕೆ ಮಾಡಿಲ್ಲ ಎಂದೂ ಸ್ಪಷ್ಟಪಡಿಸಿರುವ ಪೇಜಾವರ ಶ್ರೀ, ಮೋದಿ ಸರ್ಕಾರಕ್ಕೆ ತಾವು ನೀಡಿದ್ದ ಸಲಹೆಯನ್ನು ಮಾಧ್ಯಮಗಳು ತಪ್ಪಾಗಿ ಕಲ್ಪಿಸಿಕೊಂಡು ವರದಿ ಮಾಡಿವೆ ಎಂದು ಹೇಳಿದರು. ಗಂಗಾ ಶುದ್ದೀಕರಣ ಕೆಲಸ ಇನ್ನಷ್ಟು ಚುರುಕುಗೊಳಿಸುವಂತೆ ಮಾತ್ರ ತಾವು ಸಲಹೆ ನೀಡಿದ್ದು, ಇದಕ್ಕೆ ಬೇರೆ ಅಥರ್ಥ ಕಲ್ಪಿಸುವ ಅವಶ್ಯಕತೆ ಇರಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಇನ್ನು ರಾಜ್ಯದ ಸಮ್ಮಿಶ್ರ ಸರ್ಕಾರದ ವಿಚಾರ ಪ್ರಸ್ತಾಪಿಸಿದ ಪೇಜಾವರ ಶ್ರೀ, ಎರಡು ಪಕ್ಷಕ್ಕಿಂತ ಸರ್ವ ಪಕ್ಷ ಆಡಳಿತಕ್ಕೆ ಬಂದರೆ ಒಳ್ಳೇಯದು ಎಂದು ಅಭಿಪ್ರಾಯಪಟ್ಟಿದ್ದಾರೆ. ಸರ್ವ ಪಕ್ಷ ಬಂದರೆ ರೆಸಾರ್ಟ್ ರಾಜಕಾರಣ, ಕುದುರೆ ವ್ಯಾಪಾರ ನಿಲ್ಲುತ್ತದೆ ಎಂದಿರುವ ಅವರು, ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್, ಜೆಡಿಎಸ್ ಪರಸ್ಪರ ಬೈದಾಡಿಕೊಂಡು ಈಗ ಜೊತೆಯಾಗಿದ್ದಾರೆ. ಅಷ್ಟು ಬೈದಾಡಿಕೊಂಡಿದ್ದವರಿಂದ ಸ್ಥಿರ ಸರ್ಕಾರ ಕೊಡಲು ಸಾಧ್ಯವಿಲ್ಲ ಎಂದು ಹೇಳಿದರು.