*ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜದ ಅಗತ್ಯವಿದೆ ಅದು ಆಗಬೇಕು - ಶೇ.56 *ನಾಡಗೀತೆ ಈಗಾಗಲೇ ಇದೆ. ಪ್ರತ್ಯೇಕ ಧ್ವಜ  ಕೊಡುವುದಾದರೆ ಕೊಡಲಿ ಬಿಡುವುದಾದರೆ ಬಿಡಲಿ - ಶೇ.23*ದೇಶಕ್ಕೊಂದೆ ಧ್ವಜ ಇರಬೇಕು. ಹೀಗಾಗಿ ಪ್ರತ್ಯೇಕ ಧ್ವಜ ಅಗತ್ಯವಿಲ್ಲ.  ಖಂಡಿತಾ ಬೇಡ ಶೇ.9*ಈ ಬಗ್ಗೆ ನಮಗೆ ಹೆಚ್ಚಿನ ವಿಚಾರ  ಗೊತ್ತಿಲ್ಲ ಶೇ.11

ಬೆಂಗಳೂರು(ಡಿ.6): ಕನ್ನಡಿಗರ ಅಸ್ಮಿತೆಯನ್ನು ಬಡಿದೆಬ್ಬಿಸಿ ಸ್ವಾಭಿಮಾನದ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಸಿದ್ದರಾಮಯ್ಯ ಇತ್ತೀಚೆಗೆ ಪ್ರತ್ಯೇಕ ಕನ್ನಡ ಧ್ವಜದ ಪ್ರಸ್ತಾಪ ಮಾಡಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ರಾಷ್ಟ್ರೀಯವಾದವನ್ನು ಪ್ರತಿಪಾದಿಸುವ ಬಿಜೆಪಿಯವರು ರಾಜ್ಯಗಳಿಗೆ ಪ್ರತ್ಯೇಕ ಧ್ವಜ ಬೇಕಿಲ್ಲ, ದೇಶಕ್ಕೊಂದೇ ತ್ರಿವರ್ಣ ಧ್ವಜ ಇರಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ, ಸಮೀಕ್ಷೆಯಲ್ಲಿ ಕನ್ನಡಿಗರು ಪ್ರತ್ಯೇಕ ನಾಡಧ್ವಜದ ಬಗ್ಗೆ ಪ್ರಬಲವಾಗಿ ವಕಾಲತ್ತು ವಹಿಸಿರುವುದು ಕಾಣಿಸುತ್ತಿದೆ. ಶೇ.78ರಷ್ಟು ಜನರು ಕರ್ನಾಟಕಕ್ಕೆ ಅಧಿಕೃತ ರಾಜ್ಯಧ್ವಜ ಇರಬೇಕು ಎಂಬ ಅಭಿಪ್ರಾಯದ ಪರವಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೂ ಕೂಡ ಬಿಜೆಪಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಬಹುದು. ಹೆಚ್ಚುಕಮ್ಮಿ ರಾಜ್ಯದ ಎಲ್ಲಾ ಭಾಗದಲ್ಲೂ ಪ್ರತ್ಯೇಕ ಧ್ವಜ ಇರಲಿ ಎನ್ನುವವರ ಸಂಖ್ಯೆ ಶೇ.70ಕ್ಕಿಂತ ಜಾಸ್ತಿಯಿದೆ. ಮಧ್ಯ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದಲ್ಲಂತೂ ಶೇ.90ಕ್ಕಿಂತ ಹೆಚ್ಚು ಜನ ಪ್ರತ್ಯೇಕ ಧ್ವಜದ ಪರವಾಗಿದ್ದಾರೆ. ವಿಶೇಷವೆಂದರೆ ಶೇ.70ಕ್ಕಿಂತ ಹೆಚ್ಚು ಮುಸ್ಲಿಮರು ಕೂಡ ಪ್ರತ್ಯೇಕ ಧ್ವಜದ ಪರ ಬ್ಯಾಟಿಂಗ್ ಮಾಡಿದ್ದು, ಇದು ಕಾಂಗ್ರೆಸ್ಸಿಗೆ ನಿಸ್ಸಂಶಯವಾಗಿ ಖುಷಿಯ ವಿಚಾರ.