ಮಂಗಳ ಮುಖಿಯರು ಅಟ್ಟಿಸಿಕೊಂಡು ಬಂದ ಕಾರಣಕ್ಕೆ ಕೊಟ್ಟಿಗೆಯಲ್ಲಿ ಅವಿತುಕೊಂಡಿದ್ದ ವ್ಯಕ್ತಿಯೊಬ್ಬನಿಗೆ ಕಳ್ಳನೆಂದು ಭಾವಿಸಿ ಹಲ್ಲೆ ನಡೆಸಿ ಕೊಂದಿರುವ ಘಟನೆ  ಕೋರೆಹುಂಡಿ ಗ್ರಾಮದಲ್ಲಿ ನಡೆದಿದೆ.

ಮೈಸೂರು(ಅ.08): ಮಂಗಳ ಮುಖಿಯರು ಅಟ್ಟಿಸಿಕೊಂಡು ಬಂದ ಕಾರಣಕ್ಕೆ ಕೊಟ್ಟಿಗೆಯಲ್ಲಿ ಅವಿತುಕೊಂಡಿದ್ದ ವ್ಯಕ್ತಿಯೊಬ್ಬನಿಗೆ ಕಳ್ಳನೆಂದು ಭಾವಿಸಿ ಹಲ್ಲೆ ನಡೆಸಿ ಕೊಂದಿರುವ ಘಟನೆ ಕೋರೆಹುಂಡಿ ಗ್ರಾಮದಲ್ಲಿ ನಡೆದಿದೆ.

ಮೃತ ರಮೇಶ್ ಮೈಸೂರು ಜಿಲ್ಲೆಯ ಬದನವಾಳು ನಿವಾಸಿಯಾಗಿದ್ದು, ರಮೇಶ್​ ರಸ್ತೆಯಲ್ಲಿ ಸಂಚಾರ ಮಾಡುವಾಗ ಆತನಿಗೆ ಮಂಗಳ ಮುಖಿಯರು ಆತನಿಗೆ ಕಾಟ ನೀಡಲು ಶುರು ಮಾಡಿದ್ರು. ಅವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಮೃತ ರಮೇಶ್​, ಕೋರೆಹುಂಡಿ ಗ್ರಾಮದ ಚಂದ್ರಶೇಖರ್ ಎಂಬುವರ ಕೊಟ್ಟಿಗೆಗೆ ಪ್ರವೇಶ ಮಾಡಿ ಅಲ್ಲಿ ಅವಿತು ಕುಳಿತುಕೊಂಡಿದ್ದನ್ನು. ಇದನ್ನ ಗಮನಿಸಿದ ಸ್ಥಳೀಯರು ಮೃತ ರಮೇಶ್​'ನನ್ನು ಕಳ್ಳನೆಂದು ಭಾವಿಸಿ ಕಂಬಕ್ಕೆ ಕಟ್ಟಿಹಾಕಿ ತೀವ್ರ ಹಲ್ಲೆ ನಡೆಸಿದ್ರು. ಹಲ್ಲೆಗೊಳಾದ ರಮೇಶ್​ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಸಿ.ಪಿ.ಐ.ಗೋಪಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.