ದಸರಾ ಪ್ರಯುಕ್ತ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಧಾನಿ ನರೇಂದ್ರ ಮೋದಿ ಮತ್ತಿತರ ನಾಯಕರು ಭಾಗವಹಿಸಿದ್ದರು.

ನವದೆಹಲಿ(ಅ.19): ಶರನವರಾತ್ರಿಯ 9 ನೇ ದಿನವಾದ ಇಂದು ವಿಜಯದಶಮಿಯನ್ನು ದೇಶಾದ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.
ದಸರಾ ಪ್ರಯುಕ್ತ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಧಾನಿ ನರೇಂದ್ರ ಮೋದಿ ಮತ್ತಿತರ ನಾಯಕರು ಭಾಗವಹಿಸಿದ್ದರು.

Add Asianetnews Kannada as a Preferred SourcegooglePreferred

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಬೆಂಕಿಯ ಬಾಣಗಳಿಂದ ರಾವಣ ಪ್ರತಿಕೃತಿ ದಹಿಸಿದರು. ಈ ವೇಳೆ ಮಾತನಾಡಿದ ಮೋದಿ, ದೇಶದ ಜನತೆಗೆ ವಿಜಯ ದಶಮಿಯ ಶುಭ ಕೋರಿದರು.

Scroll to load tweet…

ಪಶ್ಚಿಮ ಭಾರತದಲ್ಲಿ ದುರ್ಗಾ ಪೂಜೆ ಅಂತಿಮ ದಿನವಾಗಿ ವಿಜಯದಶಮಿ ಆಚರಿಸಿದರೆ, ಉತ್ತರ ಭಾರತದಾದ್ಯಂತ ದಸರಾ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಈ ವೇಳೆ ದುಷ್ಟ ಸಂಹಾರದ ಸಂಕೇತವಾಗಿ ರಾವಣ, ಕುಂಭಕರ್ಣ, ಪ್ರತಿಕೃತಿಗಳನ್ನು ನಿರ್ಮಿಸಿ ಅವುಗಳನ್ನು ದಹಿಸಲಾಗುತ್ತದೆ.

Scroll to load tweet…

ಈಮಧ್ಯೆ ದುಷ್ಟ ಸಂಹಾರದ ಸಂಕೇತವಾಗಿ ಆಚರಿಸುವ ವಿಜಯದಶಮಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಮೂಡಿಸಲಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭ ಕೋರಿದ್ದಾರೆ.