ಬಾಬಾ ಜೈ ಗುರು ದೇವ್ ಅವರ ಮೆರವಣಿಗೆಯಲ್ಲಿ ಕಾಲ್ತುಳಿದಲ್ಲಿ ಮೃತಪಟ್ಟವರಿಗೆ ಪ್ರದಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ

ನವದೆಹಲಿ (ಅ.15): ಬಾಬಾ ಜೈ ಗುರು ದೇವ್ ಅವರ ಮೆರವಣಿಗೆಯಲ್ಲಿ ಕಾಲ್ತುಳಿದಲ್ಲಿ ಮೃತಪಟ್ಟವರಿಗೆ ಪ್ರದಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಾರಣಾಸಿಯಲ ಗಂಗಾ ನದಿ ತಟದ ರಾಮನಗರದ ಬಳಿ ಬಾಬಾ ಜೈಗುರುದೇವ್ ಅವರ ಭಕ್ತರು ನಡೆಸುತ್ತಿದ್ದ ಮೆರವಣಿಗೆಯಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ 19ಕ್ಕೂ ಹೆಚ್ಚು ಮಂದಿ ಸತ್ತಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ.

ಕಾಲ್ತುಳಿತದಲ್ಲಿ ಸಿಲುಕಿದವರಿಗೆ ಸಹಾಯ ಒದಗಿಸಲು ನಾನು ಅಧಿಕಾರಿಗಳಿಗೆ ಹೇಳಿದ್ದೇನೆ ಎಂದು ಮೋದಿ ಹೇಳಿದ್ದಾರೆ. ಈ ಘಟನೆಯಿಂದಾಗಿ ಬಹಳ ಬೇಸರವಾಗಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಗುಣಮುಖರಾಗಲು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ

Scroll to load tweet…