ಉತ್ತರ ಪ್ರದೇಶ ಚುನಾವವಣೆ ಬಿಎಸ್ಪಿ, ಸಮಾಜವಾದಿ ಪಕ್ಷವನ್ನು ತೊಲಗಿಸುವ ಉತ್ಸವವಾಗಿ ಮಾರ್ಪಡಲಿದೆ ಎಂದು  ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳಿಗೆ ಮಾತಿನ ಚಾಟಿ ಬೀಸಿದ್ದಾರೆ.

ಮಿರ್ಜಾಪುರ (ಮಾ.03): ಉತ್ತರ ಪ್ರದೇಶ ಚುನಾವವಣೆ ಬಿಎಸ್ಪಿ, ಸಮಾಜವಾದಿ ಪಕ್ಷವನ್ನು ತೊಲಗಿಸುವ ಉತ್ಸವವಾಗಿ ಮಾರ್ಪಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳಿಗೆ ಮಾತಿನ ಚಾಟಿ ಬೀಸಿದ್ದಾರೆ.

Add Asianetnews Kannada as a Preferred SourcegooglePreferred

ಉತ್ತರ ಪ್ರದೇಶದಲ್ಲಿ ನಾವು ಸರ್ಕಾರವನ್ನು ರಚಿಸಿದ ಬಳಿಕ ರೈತರ ಸಾಲವನ್ನು ಮನ್ನಾ ಮಾಡಲಿದ್ದೇವೆ. ರಾಜ್ಯದಲ್ಲಿ ಕೃಷಿಕರ ಸಬಲೀಕರಣಗೊಳಿಸುವುದೇ ಬಿಜಿಪಿಯ ಗುರಿ. 2022 ರ ವೇಳೆಗೆ ಭಾರತ 75 ನೇ ಸ್ವತಂತ್ರ ದಿನಾಚರಣೆಯನ್ನು ಆಚರಿಸುವ ಹೊತ್ತಿಗೆ ರೈತರ ಆದಾಯವನ್ನು

ದ್ವಿಗುಣಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯನ್ನು ಎಸ್ಪಿ, ಬಿಎಸ್ಪಿ ಪಕ್ಷಗಳು ಸಂಭ್ರಮಾಚರಣೆ ಎನ್ನುವ ರೀತಿಯಲ್ಲಿ ನೋಡುತ್ತಿದ್ದಾರೆ. ಆದರೆ ಈ ಚುನಾವಣೆ ಎಸ್ಪಿ, ಬಿಎಸ್ಪಿ ಪಕ್ಷವನ್ನು ಉತ್ತರ ಪ್ರದೇಶದಿಂದ ಹೊರ ಹಾಕುವ ಸಂಭ್ರಮಾರಚರಣೆಯಾಗಲಿದೆ. ಉತ್ತರ ಪ್ರದೇಶದ ಭವಿಷ್ಯವನ್ನು ನಾವು ನಿರ್ಧರಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.