ಪಂಚ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಮಾತನಾಡದ ಪ್ರಧಾನಿ| ಸಂಸತ್ತಿನ ಎದುರಿಗೆ ಮಾಧ್ಯಮಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ| ಚಳಿಗಾಲದ ಅಧಿವೇಶನದ ಯಶಸ್ಸಿಗೆ ವಿಪಕ್ಷಗಳನ್ನು ಆಗ್ರಹಿಸಿದ ಪ್ರಧಾನಿ| ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಲು ನಕಾರ
ನವದೆಹಲಿ(ಡಿ.11): ಇಂದು ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಸಂಸತ್ತಿನ ಚಳಿಗಾಲದ ಅಧಿವೇಶವನ್ನು ಪ್ರತಿಪಕ್ಷಗಳ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸುವ ಭರವಸೆಯನ್ನು ಈ ವೇಳೆ ಪ್ರಧಾನಿ ಮೋದಿ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತು, ಚರ್ಚೆ, ಮನಸ್ತಾಪ ಇವೆಲ್ಲವೂ ಸಾಮಾನ್ಯ. ಪ್ರತಿಪಕ್ಷಗಳ ಟೀಕೆಗಳನ್ನು ಸ್ವೀಕರಿಸಿ ಅರ್ಥಪೂರ್ಣ ಅಧಿವೇಶನ ನಡೆಸಲಾಗುವುದು ಎಂದು ಮೋದಿ ಹೇಳಿದರು.
ಈ ಮಧ್ಯೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸದೇ ಮೋದಿ ಸಂಸತ್ತಿನ ಒಳಗೆ ಪ್ರವೇಶ ಮಾಡಿದರು.
