ಜನರ ಮೇಲೆ ನಂಬಿಕೆ ಇತ್ತು: ಮನ್ ಕಿ ಬಾತ್’ನಲ್ಲಿ ಮೋದಿ ಮುತ್ತು!
ಪ್ರಧಾನಿ ಮೋದಿಯಿಂದ ಎರಡನೇ ಅವಧಿಯ ಮೊದಲ ಮನ್ ಕಿ ಬಾತ್| ಮನ್ ಕಿ ಬಾತ್’ನಲ್ಲಿ ಜನರ ಮೇಲೆ ನಂಬಿಕೆ ಇದೆ ಎಂದ ಮೋದಿ| ‘ದೇಶ ಕಟ್ಟುವ ಮಹಾನ್ ಕಾರ್ಯದಲ್ಲಿ ಇಡೀ ಸಮಾಜ ಒಂದಾಗಿದೆ’| ಮೊದಲ ಮನ್ ಕಿ ಬಾತ್’ನಲ್ಲಿ ನೀರಿನ ಸಮಸ್ಯೆ ಕುರಿತು ಮಾತನಾಡಿದ ಪ್ರಧಾನಿ|
ನವದೆಹಲಿ(ಜೂ.30): ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ‘ಮನ್ ಕಿ ಬಾತ್’ ಉದ್ದೇಶಿಸಿ ಮಾತನಾಡಿದ್ದಾರೆ.
Delight to connect again! Watch #MannKiBaat. https://t.co/nyU2AiuB4b
— Narendra Modi (@narendramodi) June 30, 2019
ಮೊದಲನೆಯ ಅವಧಿಯ ಕೊನೆಯ ಮನ್ ಕಿ ಬಾತ್’ನಲ್ಲಿ ತಾವು ಶೀಘ್ರದಲ್ಲೇ ಮತ್ತೆ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ಜನರನ್ನು ತಲುಪುವುದಾಗಿ ಪ್ರಧಾನಿ ಮೋದಿ ವಾಗ್ದಾನ ಮಾಡಿದ್ದರು.
Four months, thousands of letters, mails and suggestions…
— Narendra Modi (@narendramodi) June 30, 2019
It has been a long time.
I have missed #MannKiBaat and am glad we have once again connected through the radio.
Here are some thoughts on the last four months. #MannKiBaat pic.twitter.com/02DzJ3bCx6
ಅದರಂತೆ ಎರಡನೇ ಅವಧಿಯ ಮೊದಲ ಮನ್ ಕಿ ಬಾತ್’ನಲ್ಲಿ ತಾವು ಈ ರೀತಿ ವಾಗ್ದಾನ ಮಾಡಲು, ಜನರ ಮೇಲೆ ತಮಗಿದ್ದ ಅಪಾರ ನಂಬಿಕೆಯೇ ಕಾರಣ ಎಂದು ಮೋದಿ ಹೇಳಿದ್ದಾರೆ.
PM Narendra Modi: In the 2019 General elections, India witnessed 61 crore voters exercising their franchise. It was the largest democratic election ever held in the world. In a remote area of Arunachal Pradesh, just for one voter, a booth was set up. (file pic) #MannKiBaat pic.twitter.com/60XfFEU2V5
— ANI (@ANI) June 30, 2019
ಕಳೆದ 5 ವರ್ಷಗಳಲ್ಲಿ ತಾವು ಮನ್ ಕಿ ಬಾತ್ ಕಾರ್ಯಕ್ರಮಕ್ಕಾಗಿ ಅನೇಕ ಪತ್ರಗಳನ್ನ ಸ್ವೀಕರಿಸಿದ್ದು, ಒಂದೇ ಒಂದು ಪತ್ರ ಸ್ವಂತ ಕೆಲಸಕ್ಕಾಗಿ ಮನವಿ ಮಾಡಿ ಬಂದಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.
ದೇಶ ಕಟ್ಟುವ ಮಹಾನ್ ಕಾರ್ಯದಲ್ಲಿ ಇಡೀ ಸಮಾಜ ಒಂದಾಗಿರುವ ಸಂಕೇತ ಸ್ಪಷ್ಟವಾಗಿ ಕಂಡು ಬರುತ್ತಿದ್ದು, ನವ ಭಾರತದ ತಮ್ಮ ಸಂಕಲ್ಪ ಸಾಕಾರವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮೋದಿ ಹೇಳಿದರು.
Our efforts today will improve the lives of the future generations!
— Narendra Modi (@narendramodi) June 30, 2019
Let us come together to conserve water.
I have three requests for you all. Here they are. #JanShakti4JalShakti pic.twitter.com/Xu472fpiCR
ಸದ್ಯ ದೇಶ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ನೀರಿನ ಉಳಿತಾಯವೇ ಈ ಸಮಸ್ಯೆಗೆ ಪರಿಹಾರ ಎಂದು ಪ್ರಧಾನಿ ಹೇಳಿದರು. ಸಮಾಜ ತಾನೇ ಮುಂದಾಗಿ ನೀರಿನ ಉಳಿತಾಯ ಮಾಡಿದರೆ ಅದು ನಿಜಕ್ಕೂ ಹೊಸ ಕ್ರಾಂತಿಕಾರಿ ಬದಲಾವಣೆಗಳಿಗೆ ನಾಂದಿಯಾಗಲಿದೆ ಎಂದು ಪ್ರಧಾನಿ ನುಡಿದರು.