2019ರ ಲೋಕಸಭೆ ಚುನಾವಣೆ ಗೆಲ್ಲು ಪ್ರಧಾನಿ ನರೇಂದ್ರ ಮೋದಿ ಮಹಾ ಅಸ್ತ್ರ. 5 ರಾಜ್ಯಗಳ ಚುನಾವಣೆಯಲ್ಲಿ ಸೋತ ನಂತರ ನರೇಂದ್ರ ಮೋದಿ ಬಿಗ್ ಪ್ಲ್ಯಾನ್! ರೈತರನ್ನು ಕಡೆಗಣಿಸಿದ್ದೇ ಸೋಲಿಗೆ ಮುಳುವಾಯ್ತಾ ಎಂದು ಮೋದಿ ಪರಿಗಣನೆ! ದೇಶದ ರೈತರ ಸಮಸ್ಯೆಗಳನ್ನು ಸಮರೋಪಾದಿಯಲ್ಲಿ ಪರಿಹರಿಸುವುದಕ್ಕೆ ಪ್ಲ್ಯಾನ್!

ನವದೆಹಲಿ, (ಡಿ.12): ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರೈತರ ಸಾಲ ಮನ್ನಾ ಮಾಡಲು ಮುಂದಾಗಿದೆ.

Add Asianetnews Kannada as a Preferred SourcegooglePreferred

ಲೋಕಸಭಾ ಚುನಾವಣೆಯ ದಿಕ್ಸೂಚಿ ಎನ್ನಲಾಗಿದ್ದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಇದ್ರಿಂದ ಎಚ್ಚೆತ್ತಿರುವ ಬಿಜೆಪಿ, ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪೂರಕವಾಗಬಹುದೆಂಬ ಕಾರಣಕ್ಕೆ ಸಾಲ ಮನ್ನಾ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.

"

ರೈತರ ಸಾಲ ಮನ್ನಾ ಕ್ರಮಕ್ಕೆ ಆರ್'ಬಿಐ ಆಕ್ಷೇಪ

ಪಂಚ ರಾಜ್ಯಗಳಲ್ಲಿ ಬಿಜೆಪಿ ಸೋಲಿಗೆ ಪ್ರಮುಖ ಕಾರಣವೇನು ಎಂಬುವುದನ್ನ ನೋಡಿದಾಗ, ಪ್ರಮುಖವಾಗಿ ರೈತರ ಅಸಮಾಧಾನ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಎಂದು ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು.

ಇದ್ರಿಂದ ಬಿಜೆಪಿ ಸೋಲಿಗೆ ಮುಖ್ಯ ಕಾರಣ ಎಂದು ಪಕ್ಷದ ನಾಯಕರು ಪ್ರಧಾನಿ ನರೇಂದ್ರ ಮೋದಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಮೋದಿ ಅವರು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದಕ್ಕೆ ಈಗ ಪೂರಕ ಸಿದ್ಧತೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಈ ಕುರಿತು ಆದೇಶ ಹೊರಬೀಳುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

ಈ ಹಿಂದೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಯಾವುದೇ ಕಾರಣಕ್ಕೂ ಸಾಲ ಮನ್ನಾ ಮಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.