ಪ್ರಧಾನಿ ನರೇಂದ್ರ ಮೋದಿ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾರಿಗೆ ಸ್ವಾಗತ ನೀಡಿದರು.  ಮೋದಿಯವರು ಪ್ರಧಾನ ಮಂತ್ರಿಯಾದ ಬಳಿಕ ಶೇಖ್ ಹಸೀನಾ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಇವರ ಜೊತೆ ಬೃಹತ್ ಕೈಗಾರಿಕಾ ಸಚಿವ ಕೂಡಾ ಉಪಸ್ಥಿತರಿದ್ದಾರೆ.

ನವದೆಹಲಿ (ಏ.07): ಪ್ರಧಾನಿ ನರೇಂದ್ರ ಮೋದಿ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾರಿಗೆ ಸ್ವಾಗತ ನೀಡಿದರು. ಮೋದಿಯವರು ಪ್ರಧಾನ ಮಂತ್ರಿಯಾದ ಬಳಿಕ ಶೇಖ್ ಹಸೀನಾ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಇವರ ಜೊತೆ ಬೃಹತ್ ಕೈಗಾರಿಕಾ ಸಚಿವ ಕೂಡಾ ಉಪಸ್ಥಿತರಿದ್ದಾರೆ.

Add Asianetnews Kannada as a Preferred SourcegooglePreferred

ಶೇಖ್ ಹಸೀನಾ ಭಾರತದಲ್ಲಿ 4 ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದು ನಾಗರೀಕ ಪರಮಾಣು ಸಹಕಾರ ಮತ್ತು ರಕ್ಷಣೆಗೆ ಸಂಬಂಧಿಸಿದಂತೆ 25 ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ ಹಾಕಲಿವೆ.

ಬಹುಕಾಲದಿಂದ ಬಾಕಿಯಿರುವ ತೀಸ್ತಾ ನದಿ ನೀರು ಹಂಚಿಕೆ ವಿಚಾರದ ಬಗ್ಗೆ ಮಾತುಕತೆ ನಡೆಸಿ ಬಗೆಹರಿಸುವ ನಿರೀಕ್ಷೆಯಿದೆ. ಅದೇ ರೀತಿ ಭಯೋತ್ಪಾದನೆ, ಉಭಯ ದೇಶಗಳಲ್ಲಿ ಭದ್ರತಾ ಸಹಕಾರವನ್ನು ಹೆಚ್ಚಿಸುವ ಸಂಬಂಧ ಚರ್ಚೆ ನಡೆಸಲಿದ್ದಾರೆ. ಕಲ್ಕತ್ತಾ-ಕೌಲ್ನಾ ನಡುವೆ ಬಸ್ ಹಾಗೂ ರೈಲು ಸೇವೆಗೂ ಕೂಡಾ ಚಾಲನೆ ಸಿಗಲಿದೆ.