ಕಾವೇರಿ ನಿರ್ವಹಣಾ ಮಂಡಳಿ ಬಗ್ಗೆ ಮೋದಿ ಮೌನ
ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಕುರಿತಂತೆ ತಮಿಳುನಾಡಿನ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿದ್ದಾರೆ.
ಚೆನ್ನೈ: ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಕುರಿತಂತೆ ತಮಿಳುನಾಡಿನ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿದ್ದಾರೆ.
ಶನಿವಾರ ಇಲ್ಲಿ ಮಾಜಿ ಸಿಎಂ ಜಯಲಲಿತಾ ಅವರ ಜನ್ಮದಿನದ ನಿಮಿತ್ತ ಸಬ್ಸಿಡಿ ಸ್ಕೂಟರ್ ಯೋಜನೆಗೆ ಮೋದಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ತಮಿಳುನಾಡು ಮುಖ್ಯ ಮಂತ್ರಿ ಕೆ. ಪಳನಿಸ್ವಾಮಿ ಹಾಗೂ ಡಿಸಿಎಂ ಒ. ಪನ್ನೀರಸೆಲ್ವಂ , ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣಾ ಸಮಿತಿ ರಚನೆಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆಯಲ್ಲಿದ್ದ ಮೋದಿ ಅವರನ್ನು ಆಗ್ರಹಿಸಿದರು.
ಆದರೆ, ಬಳಿಕ ಮಾತನಾಡಿದ ಮೋದಿ, ಒಮ್ಮೆಯೂ ಕಾವೇರಿ ನಿಯಂತ್ರಣ ಮಂಡಳಿ ರಚನೆಯ ಬಗ್ಗೆ ಪ್ರಸ್ತಾಪಿಸಲಿಲ್ಲ.