ಸಂಘ, ಬಿಜೆಪಿ ನಾಯಕರಿಗೆ ಮೋದಿ ಔತಣಕೂಟತಮ್ಮ ಅಧಿಕೃತ ನಿವಾಸದಲ್ಲಿ ಔತಣಕೂಟ ಆಯೋಜನೆ2019 ರ ಲೋಕಸಭಾ ಚುನಾವಣೆಗೆ ತಯಾರಿ?ಸೂರಜ್‌ಕುಂಡ್ ಸಂಘದ ಸಭೆಯಲ್ಲಿ ಬಿಜೆಪಿ ನಾಯಕರು

ನವದೆಹಲಿ(ಜೂ.15): ಆರ್‌ಎಸ್‌ಎಸ್‌ ಸಂಘ ಪರಿವಾರ ಮತ್ತು ಬಿಜೆಪಿಯ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಔತಣಕೂಟ ಏರ್ಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ರಾತ್ರಿ ತಮ್ಮ ಅಧಿಕೃತ ನಿವಾಸದಲ್ಲೇ ಮೋದಿ ಔತಣಕೂಟ ಆಯೋಜಿಸಿದ್ದು, 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಔತಣಕೂಟದ ಆಯೋಜನೆ ಮಹತ್ವ ಪಡೆದುಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

Add Asianetnews Kannada as a Preferred SourcegooglePreferred

ಇದೇ ವೇಳೆ ಆರ್‌ಎಸ್‌ಎಸ್‌ ಹಾಗೂ ಸಂಘ ಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತರು ಹರಿಯಾಣದ ಸೂರಜ್‌ಕುಂಡ್ ನಲ್ಲಿ ಸಭೆ ಸೇರಿದ್ದು, ಎರಡು ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಆರ್‌ಎಸ್‌ಎಸ್‌ ಸಹ ಸಂಘಟನೆಗಳ ನಡುವಿನ ಸಮನ್ವಯತೆ ಹಾಗೂ 2019 ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಹತ್ವವೆನಿಸುವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. 

ಇನ್ನು ಹರಿಯಾಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಬಿಜೆಪಿಯ ನಾಯಕರೂ ಭಾಗಾವಹಿಸಲಿದ್ದು, ಆರ್‌ಎಸ್‌ಎಸ್‌ ನ ಪ್ರಧಾನ ಕಾರ್ಯದರ್ಶಿ ಸುರೇಶ್ ಭೈಯ್ಯಾಜಿ ಜೋಷಿ, ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೋಪಾಲ್ ಕೂಡ ಭಾಗಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಹರಿಯಾಣದ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.