104 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾರಂಭ ಉದ್ಘಾಟಿಸಿದ ಬಳಿಕ ಮೋದಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ತಿರುಪತಿ (ಜ.03): ಭಾರತೀಯ ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ತಿರುಪತಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳಿ ವಿಶೇಷ ದರ್ಶನ ಪಡೆದರು.
104 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾರಂಭ ಉದ್ಘಾಟಿಸಿದ ಬಳಿಕ ಮೋದಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಮೋದಿ ಜೊತೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಎರಡನೇ ಬಾರಿಗೆ ತಿರುಪತಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಟಿಟಿಡಿ ಸದಸ್ಯರು ತಿಮ್ಮಪ್ಪನ ಫೋಟೋ ಕಾಣಿಕೆಯಾಗಿ ನೀಡಿದರು.
