Asianet Suvarna News Asianet Suvarna News

'ನಮೋ' ರ್ಯಾಲಿಗೆ 4 ಲಕ್ಷ ಸೇರಿಸಲು ಭರ್ಜರಿ ಸಿದ್ಧತೆ

ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭವು ಫೆ.4 ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸುಮಾರು 4 ಲಕ್ಷ ಕಾರ್ಯಕರ್ತರನ್ನು ಕರೆತರುವ ಪ್ರಯತ್ನ ಪಕ್ಷದಿಂದ ನಡೆದಿದೆ.

PM Narendra Modi Rally in Bengaluru on Feb 04

ಬೆಂಗಳೂರು (ಜ.31): ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭವು ಫೆ.4 ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸುಮಾರು 4 ಲಕ್ಷ ಕಾರ್ಯಕರ್ತರನ್ನು ಕರೆತರುವ ಪ್ರಯತ್ನ ಪಕ್ಷದಿಂದ ನಡೆದಿದೆ.

ಅರಮನೆ ಮೈದಾನದಲ್ಲಿ ಈ ಸಮಾರಂಭಕ್ಕೆ ಭಾರೀ ಸಿದ್ಧತೆ ನಡೆಸಲಾಗಿದೆ. ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರು ಆಗಮಿಸಲಿದ್ದು, ಸರ್ಕಾರಿ ಬಸ್‌ಗಳನ್ನು ಈಗಾಗಲೇ ಬುಕ್ಕಿಂಗ್ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವುದರಿಂದ ಯಾವುದೇ ಸಮಸ್ಯೆಯಾಗದಂತೆ ಯಶಸ್ವಿಗೊಳಿಸಲು ರಾಜ್ಯದ ನಾಯಕರು ಪಣತೊಟ್ಟಿದ್ದು, ಅವಿರತವಾಗಿ ಶ್ರಮಿಸುತ್ತಿದ್ದಾರೆ.

ಸಮಾವೇಶದಲ್ಲಿ 4 ಲಕ್ಷ ಕಾರ್ಯಕರ್ತರು, ಬೆಂಬಲಿಗರನ್ನು ಸೇರಿಸಲು ಬಿಜೆಪಿ ಮುಖಂಡರು ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಈವರೆಗೆ ಕೆಎಸ್‌'ಆರ್‌'ಟಿಸಿಯ 80 ಹಾಗೂ ಬಿಎಂಟಿಸಿಯಿಂದ ಸುಮಾರು  350 ಬಸ್'ಗಳನ್ನು ಬುಕ್ಕಿಂಗ್ ಮಾಡಲಾಗಿದೆ. ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರನ್ನು ಕರೆ ತರಲು ಕೆಎಸ್‌ಆರ್‌ಟಿಸಿಯ 4 ವಿಭಾಗಗಳಿಂದಲೂ ಬಸ್'ಗಳ ವ್ಯವಸ್ಥೆ ಮಾಡಲಾಗಿದೆ. ಜತೆಗೆ ನೂರಾರು ಖಾಸಗಿ  ವಾಹನ ಕಾದಿರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸಮಾವೇಶವನ್ನು ಯಶಸ್ವಿಗೊಳಿಸುವ ಸಂಬಂಧ ದೆಹಲಿಯಲ್ಲಿ ಸೋಮವಾರ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಇತರೆ ಮುಖಂಡರ ಸಮ್ಮುಖದಲ್ಲಿ ರಾಜ್ಯದ ನಾಯಕರೊಂದಿಗೆ ಸಭೆ ನಡೆಸಲಾಯಿತು.

 

Follow Us:
Download App:
  • android
  • ios