ಎಲ್ಲ ಸಂದರ್ಭಗಳಲ್ಲೂ ಚುನಾವಣೆಗೆ ಸನ್ನದ್ಧರಾಗಿದ್ದು, ಅದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಿಗೆ ಸಂಬಂಸಿ ಸತತ ಕಾರ್ಯ ನಿರ್ವಹಿಸುತ್ತಿರುವಂತೆ ಪ್ರಧಾನಿ ತಿಳಿಸಿದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಂಸದರೊಬ್ಬರು ತಿಳಿಸಿದ್ದಾರೆ.

ನವದೆಹಲಿ(ಮಾ.25): ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮತ್ತು ರಾಜಸ್ಥಾನದ ಸಂಸದರಿಗೆ ಬೆಳಗ್ಗಿನ ಉಪಹಾರವೊಂದನ್ನು ಆಯೋಜಿಸಿ ಮುಂಬರುವ ಎರಡು ರಾಜ್ಯಗಳ ಚುನಾವಣಾ ತಯಾರಿ ಬಗ್ಗೆ ಚರ್ಚಿಸಿದ್ದಾರೆ. ಯಾವುದೇ ಸಮಯದಲ್ಲಾದರೂ ಚುನಾವಣೆ ಎದುರಿಸಲು ಸಿದ್ಧವಾಗಿರಿ ಎಂದು ಮೋದಿ ಸಂಸದರಿಗೆ ಕರೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಲ್ಲ ಸಂದರ್ಭಗಳಲ್ಲೂ ಚುನಾವಣೆಗೆ ಸನ್ನದ್ಧರಾಗಿದ್ದು, ಅದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಿಗೆ ಸಂಬಂಸಿ ಸತತ ಕಾರ್ಯ ನಿರ್ವಹಿಸುತ್ತಿರುವಂತೆ ಪ್ರಧಾನಿ ತಿಳಿಸಿದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಂಸದರೊಬ್ಬರು ತಿಳಿಸಿದ್ದಾರೆ.

ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೂಡ ಸಂಸದರನ್ನುದ್ದೇಶಿಸಿ ಮಾತನಾಡಿದ್ದಾರೆ. ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಅನಂತ ಕುಮಾರ್ ಕೂಡ ಈ ಸಂದರ್ಭ ಉಪಸ್ಥಿತರಿದ್ದರು. ಗೋವಾ, ಅಂಡಮಾನ್, ನಿಕೋಬಾರ್ ದ್ವೀಪಗಳು ಮತ್ತು ದಾಮನ್ ದಿಯು ಸಂಸದರೂ ಉಪಹಾರ ಕೂಟದಲ್ಲಿ ಭಾಗವಹಿಸಿದ್ದರು.