ಬೆಂಗಳೂರು(ಸೆ. 19): ಬಹಳ ಮಹತ್ವದ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ಇಂದು ನಡೆಯುತ್ತಿದ್ದು ಕರ್ನಾಟಕ ಈ ಬಾರಿ ಪ್ರಬಲ ವಾದ ಮಂಡಿಸಲು ಸಜ್ಜಾಗಿದೆ. ಕರ್ನಾಟಕದ ಭಾಗದಲ್ಲಿರುವ ಕಾವೇರಿ ಕೊಳ್ಳದ ಬರ ಪರಿಸ್ಥಿತಿ, ತಮಿಳುನಾಡಿನಲ್ಲಿರುವ ವಾಸ್ತವ ಸ್ಥಿತಿಯನ್ನು ಮೇಲುಸ್ತುವಾರಿ ಸಮಿತಿಗೆ ಮನವರಿಕೆ ಮಾಡಲು ಕರ್ನಾಟಕ ತಯಾರಿ ಮಾಡಿಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ನಾಟಕದ ವಾದಗಳೇನು?
* ಕರ್ನಾಟಕದಲ್ಲಿ ಕಾವೇರಿ ಕೊಳ್ಳದ ವ್ಯಾಪ್ತಿಗೆ 34,273 ಚದರ ಕಿ.ಮೀ. ಪ್ರದೇಶ ಬರುತ್ತದೆ. ಈ ಪೈಕಿ ಮೂರನೇ ಎರಡರಷ್ಟು ಭಾಗವು ಬರಪೀಡಿತವಾಗಿದೆ.
* ತಮಿಳುನಾಡಿನಲ್ಲಿರುವ ಕಾವೇರಿ ಕೊಳ್ಳದ ಮೂರನೇ ಒಂದರಷ್ಟು ಪ್ರದೇಶ ಮಾತ್ರ ಬರಪೀಡಿತವಾಗಿದೆ.
* ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಕಾವೇರಿ ನದಿ ನೀರಿನಿಂದಲೇ ಕೃಷಿ ಚಟುವಟಿಕೆ ನಡೆಸುವ ಅನಿವಾರ್ಯತೆ
* ಕಾವೇರಿ ಕೊಳ್ಳ ವ್ಯಾಪ್ತಿಯ ಕರ್ನಾಟಕದಲ್ಲಿ ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದೆ. ತಮಿಳುನಾಡಿನಲ್ಲಿ ಅಂತರ್ಜಲಮಟ್ಟ ಉತ್ತಮವಾಗಿದೆ
* ಕರ್ನಾಟಕದಲ್ಲಿ ಮಳೆಗಾಲ ಮುಗಿದಿದೆ. ತಮಿಳುನಾಡಿನಲ್ಲಿ ಮಳೆಗಾಲ ಆರಂಭವಾಗುತ್ತಿದೆ
* ತಮಿಳುನಾಡಿನ ಡ್ಯಾಂಗಳಲ್ಲಿರುವ ನೀರನ್ನು ಕೃಷಿ ಚಟುವಟಿಕೆಗಳಿಗೆ ಒದಗಿಸಲಾಗಿದೆ. ಹೀಗಾಗಿ ಸದ್ಯಕ್ಕೆ ತಮಿಳುನಾಡಿಗೆ ಕಾವೇರಿ ನದಿಯಿಂದ ಹೆಚ್ಚಿನ ನೀರು ಬೇಕಾಗಿಲ್ಲ
* ಮುಂದೆ ಬರಲಿರುವ ಮಳೆಯನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳಲು ಮನವಿ

ಕರ್ನಾಟಕವು ಮೇಲ್ಕಂಡ ಅಂಶಗಳನ್ನು ಮುಂದಿಟ್ಟುಕೊಂಡು ಮೇಲುಸ್ತುವಾರಿ ಸಮಿತಿಗೆ ಮನವರಿಕೆ ಮಾಡಿಕೊಡುವ ಸಾಧ್ಯತೆ ಇದೆ. ಸಮಿತಿ ಕೈಗೊಳ್ಳುವ ತೀರ್ಮಾನ ನಿರ್ಣಾಯಕ. ನಾಳೆ ಸುಪ್ರೀಂಕೋರ್ಟ್'ನಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಸಮಿತಿ ನಿರ್ಧಾರಗಳು ಬಹಳ ಮಹತ್ವ ಪಡೆದುಕೊಳ್ಳಲಿದೆ.