`ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ' ಚಿತ್ರ ನಿರ್ಮಾಪಕ ಅರೆಸ್ಟ್..!
`ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ' ಸಿನಿಮಾ ನಿರ್ಮಾಪಕ ಆನಂದ್ ಅಪ್ಪುಗೋಳ್ ಅವರನ್ನ ಮತ್ತೆ ಬಂಧಿಸಲಾಗಿದೆ. ಕಾರಣ ಏನು? ಇಲ್ಲಿದೆ ವಿವರ.
ಬೆಳಗಾವಿ, [ನ.06]: `ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ' ಸಿನಿಮಾ ನಿರ್ಮಾಪಕ ಆನಂದ್ ಅಪ್ಪುಗೋಳ್ ಅವರನ್ನ ಮತ್ತೆ ಬಂಧಿಸಲಾಗಿದೆ.
ಆನಂದ್ ಅಪ್ಪುಗೋಳ್ ಅವರು ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಸೊಸೈಟಿಯಿಂದ ಬಹುಕೋಟಿ ಠೇವಣಿ ವಂಚನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕುರಿತು ಖಡೇಬಜಾರ್ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.
ಬಳಿಕ ಸೊಸೈಟಿ ಅಧ್ಯಕ್ಷನಾಗಿದ್ದ ಆನಂದ್ ಅಪ್ಪುಗೋಳ್ ರನ್ನು ನಿನ್ನೆ [ಸೋಮವಾರ] ತಡರಾತ್ರಿ ಬಂಧಿಸಲಾಗಿದೆ.
ಸಂಗೊಳ್ಳಿ ರಾಯಣ್ಣ ಸೊಸೈಟಿಯಲ್ಲಿ ನಾವು ಹಣ ಠೇವಣಿ ಮಾಡಿದ್ದೆವು. ಆದರೆ ಅಪ್ಪುಗೋಳ್ ವಂಚನೆ ಮಾಡಿದ್ದಾರೆ ಎಂದು ಗ್ರಾಹಕರು ಆರೋಪಿಸಿದ್ದು, ಸೋಮವಾರ ನೂರಾರು ಗ್ರಾಹಕರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು.
ನಮ್ಮ ಹಣ ನಮಗೆ ಕೊಡಿಸುವಂತೆ ಗ್ರಾಹಕರು ತಮ್ಮ ಅಳಲು ತೋಡಿಕೊಂಡಿದ್ದರು. ಆದ್ದರಿಂದ ಪೊಲೀಸರು ಕಾರ್ಯಚರಣೆ ನಡೆಸಿ ತಡರಾತ್ರಿ ಅಪ್ಪುಗೋಳ್ ಅವರನ್ನು ಬಂಧಿಸಿದ್ದಾರೆ.