Asianet Suvarna News Asianet Suvarna News

ಜಾರಕಿಹೊಳಿ ವಿರುದ್ಧ ಕೇಸ್‌ ಹಾಕಲು ಪೊಲೀಸರಿಗೆ ಭಯ

ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಪ್ರಕರಣವೊಂದರ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹೆದರುತ್ತಿದ್ದು ಇದಕ್ಕೆ ಶಾಸಕ ಸತೀಶ ಜಾರಕಿಹೊಳಿ ಅವರ ಬೆದ​ರಿ​ಕೆಯೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. 

Police Fear To Register Complaint Against Jarkiholi Says Suresh Angadi
Author
Bengaluru, First Published Oct 3, 2018, 11:26 AM IST

ಬೆಳಗಾವಿ: ನಗರದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಹೊಸಮನಿ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆಗೆ ಮುಂದಾಗಿರುವ ಘಟ​ನೆಗೆ ಸಂಬಂಧಿಸಿದಂತೆ ಸಂಸದ ಸುರೇಶ್‌ ಅಂಗಡಿ ಅವರು ಜಿಲ್ಲಾ ಪೊಲೀಸರನ್ನು ಕಟುವಾಗಿ ಟೀಕಿಸಿದ್ದಾರೆ. 

ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹೆದರುತ್ತಿದ್ದು ಇದಕ್ಕೆ ಶಾಸಕ ಸತೀಶ ಜಾರಕಿಹೊಳಿ ಅವರ ಬೆದ​ರಿ​ಕೆಯೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್‌ ಹಾಗೂ ಜಿಲ್ಲಾಡಳಿತ ಸುಮ್ಮನೆ ಕುಳಿತಿರುವುದು ಸರಿಯಲ್ಲ. 

ಧೈರ್ಯದಿಂದ ಕೆಲಸ ನಿರ್ವಹಿಸಲು ಸಾಧ್ಯವಾಗದಿದ್ದರೆ ಅಂತಹ ಅಧಿ​ಕಾ​ರಿ​ಗಳು ಬೆಳಗಾವಿಯಿಂದ ಜಾಗ ಖಾಲಿ ಮಾಡಲಿ ಎಂದು ಒತ್ತಾಯಿಸಿದರು. ಪ್ರಕ​ರ​ಣಕ್ಕೆ ಸಂಬಂಧಿ​ಸಿ​ದಂತೆ ಸೂಕ್ತ ಕ್ರಮ ಕೈಗೊ​ಳ್ಳ​ದಿ​ದ್ದರೆ ಮುಂದಿನ ದಿನಗಳಲ್ಲಿ ಸಿಎಂ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಸಂಸದ ಸುರೇಶ ಅಂಗಡಿ ಎಚ್ಚರಿಕೆ ನೀಡಿದರು.

Follow Us:
Download App:
  • android
  • ios