ಖದರ್ ತೊರಿಸಿದ ಮಾಜಿ ಶಾಸಕನಿಗೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ.

ಯಾದಗಿರಿ, [ಅ.19]: ಮಾಜಿ ಶಾಸಕರೊಬ್ಬರು ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಆವಾಚ್ ಹಾಕಿದ ಘಟನೆ ಯಾದಗಿರಿ ಜಿಲ್ಲೆ ಸುರಪುರದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಸುರಪುರದ ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ಅವರೇ ಪೊಲೀಸರಿಗೆ ಆವಾಜ್ ಹಾಕಿದವರು. ತಾವು ಹೇಳಿದ ಸ್ಥಳಕ್ಕೆ ಬಂದಿಲ್ಲವೆಂದು ಠಾಣೆಗೆ ಬಂದು ಪೊಲೀಸರ ಮೇಲೆಯೇ ರೇಗಾಡಿದ್ದಾರೆ.

ಅಷ್ಟೇ ಅಲ್ಲದೇ ಶಾಸಕರು ಹಿಂಬಾಲಕರು ಪೊಲೀಸರಿಗೆ ಮನಬಂದಂತೆ ಬೈದಿದ್ದಾರೆ. ಈ ಹಿನ್ನಲೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲದೇ ಅವಾಚ್ಯ ಶಬ್ಧ ಬಳಕೆ ಮಾಡಿದಕ್ಕೆ ಪೊಲೀಸರರು ಸ್ವಯಂ ಪ್ರೇರಿತವಾಗಿ ಎಫ್ ಐಆರ್ ದಾಖಲು ಮಾಡಿಕೊಂಡಿದ್ದಾರೆ.

ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸೇರಿ ಒಟ್ಟು 8 ಮಂದಿ ಮೇಲೆ ಎಫ್ ಐಆರ್ ದಾಖಲಾಗಿದೆ.