ಪೊಲೀಸ್ ಪೇದೆ ಸಾಬರೆಡ್ಡಿಯ ಮೇಲೆ ಆರೋಪಿಗಳು ಚಾಕುವಿನಿಂದ ಹಲ್ಲೆ ಮಾಡುತ್ತಾರೆ. ಆಗ ಇನ್ಸ್'ಪೆಕ್ಟರ್ ಸತ್ಯನಾರಾಯಣ ಆರೋಪಿಗಳ ಮೇಲೆ 5 ಸುತ್ತು ಗುಂಡು ಹಾರಿಸುತ್ತಾರೆ.
ಬೆಂಗಳೂರು(ಜುಲೈ 24): ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾದ ಆರೋಪಿಗಳ ಮೇಲೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಇನ್ಸ್'ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ಬಳಿಕ ಆರೋಪಿಗಳನ್ನ ಬಂಧಿಸಿದ್ದಾರೆ. ಅಕ್ರಮ ಗಾಂಜಾ ಮಾರಾಟ ಸಂಬಂಧ ಆರೋಪಿಗಳನ್ನ ಬಂಧಿಸಲು ಹೋದಾಗ ಈ ಘಟನೆ ನಡೆದಿದೆ.
ಬ್ಯಾಡರಹಳ್ಳಿ ಪೊಲೀಸ್ ಇನ್ಸ್'ಪೆಕ್ಟರ್ ಸತ್ಯನಾರಾಯಣ ಅಂಡ್ ಟೀಂ, ನಿನ್ನೆ ಸಂಜೆ ಉಲ್ಲಾಳದ ವೆಂಕಟಪ್ಪ ಲೇಔಟ್'ಗೆ ತೆರಳಿ ಅಕ್ರಮ ಗಾಂಜಾ ಮಾರಾಟಗಾರರನ್ನು ಹಿಡಿಯಲು ಯತ್ನಿಸಿದೆ. ಈ ವೇಳೆ ಪೊಲೀಸ್ ಪೇದೆ ಸಾಬರೆಡ್ಡಿಯ ಮೇಲೆ ಆರೋಪಿಗಳು ಚಾಕುವಿನಿಂದ ಹಲ್ಲೆ ಮಾಡುತ್ತಾರೆ. ಆಗ ಇನ್ಸ್'ಪೆಕ್ಟರ್ ಸತ್ಯನಾರಾಯಣ ಆರೋಪಿಗಳ ಮೇಲೆ 5 ಸುತ್ತು ಗುಂಡು ಹಾರಿಸುತ್ತಾರೆ. ಬಳಿಕ, ಗಾಯಗೊಂಡ ಆರೋಪಿಗಳನ್ನ ಬಂಧಿಸುತ್ತಾರೆ. ಇದೇ ವೇಳೆ, ಘಟನೆಯಲ್ಲಿ ಗಾಯಗೊಂಡ ಪೇದೆ ಸಾಬರೆಡ್ಡಿ ಮತ್ತು ಆರೋಪಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
