ತಮಿಳುನಾಡಿನಲ್ಲಿ ಮತ್ತೆ ಹೈಡ್ರಾಮಾ ನಡೆಯುತ್ತಿದೆ. ನಿನ್ನೆಯಷ್ಟೇ ಎಐಎಡಿಎಂಕೆ ಎರಡು ಬಣಗಳು ವಿಲೀನಗೊಂಡಿದ್ದವು, ಅಲ್ಲದೆ ಶಶಿಕಲಾರನ್ನು ಎಐಎಡಿಎಂಕೆ ಪಕ್ಷದಿಂದ ಉಚ್ಛಾಟನೆ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಸಿಎಂ ಪಳನಿಸ್ವಾಮಿಗೆ ಶಾಕ್ ಕೊಡಲು ಮುಂದಾಗಿದ್ದಾರೆ.

ಚೆನ್ನೈ(ಆ.22): ತಮಿಳುನಾಡಿನಲ್ಲಿ ಮತ್ತೆ ಹೈಡ್ರಾಮಾ ನಡೆಯುತ್ತಿದೆ. ನಿನ್ನೆಯಷ್ಟೇ ಎಐಎಡಿಎಂಕೆ ಎರಡು ಬಣಗಳು ವಿಲೀನಗೊಂಡಿದ್ದವು, ಅಲ್ಲದೆ ಶಶಿಕಲಾರನ್ನು ಎಐಎಡಿಎಂಕೆ ಪಕ್ಷದಿಂದ ಉಚ್ಛಾಟನೆ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್, ಸಿಎಂ ಪಳನಿಸ್ವಾಮಿಗೆ ಶಾಕ್ ಕೊಡಲು ಮುಂದಾಗಿದ್ದಾರೆ.

Add Asianetnews Kannada as a Preferred SourcegooglePreferred

ಟಿಟಿವಿ ದಿನಕರನ್ ಬೆಂಬಲಿತ 22 ಶಾಸಕರು ಬೆಂಬಲ ವಾಪಸ್ ಪಡೆದಿದ್ದಾರೆ. ಸಿಎಂ ಪಳನಿಸ್ವಾಮಿಗೆ ನೀಡಿದ್ದ ಬೆಂಬಲವನ್ನು ವಾಪಸ್​ ಪಡೆಯುವುದಾಗಿ ರಾಜ್ಯಪಾಲ ವಿದ್ಯಾಸಾಗರ್​ ರಾವ್'​ಗೆ ಪತ್ರ ಸಲ್ಲಿಸಿದ್ದಾರೆ. ಇದರಿಂದ ತಮಿಳುನಾಡಿನ ಎಐಎಡಿಎಂಕೆ ಸರ್ಕಾರಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ.