ನಾರಾಯಣ ಗುರು, ವಿವೇಕಾನಂದರು ಹೇಳಿದ ಹಿಂದುತ್ವದ ಬಗ್ಗೆ ನಮಗೆ ಗೌರವವಿದ್ದು ಅದಕ್ಕೆ ತಲೆಬಾಗುತ್ತೇವೆ. ಆದರೆ ಕಲ್ಲಡ್ಕ ಪ್ರಭಾಕರ್ ಭಟ್, ಮೋಹನ್ ಭಾಗವತ್, ಅಮಿತ್ ಶಾ ಹೇಳುವ ಹಿಂದುತ್ವದ ಬಗ್ಗೆ ಧಿಕ್ಕಾರವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ.

ಉಡುಪಿ(ಆ.10): ನಾರಾಯಣ ಗುರು, ವಿವೇಕಾನಂದರು ಹೇಳಿದ ಹಿಂದುತ್ವದ ಬಗ್ಗೆ ನಮಗೆ ಗೌರವವಿದ್ದು ಅದಕ್ಕೆ ತಲೆಬಾಗುತ್ತೇವೆ. ಆದರೆ ಕಲ್ಲಡ್ಕ ಪ್ರಭಾಕರ್ ಭಟ್, ಮೋಹನ್ ಭಾಗವತ್, ಅಮಿತ್ ಶಾ ಹೇಳುವ ಹಿಂದುತ್ವದ ಬಗ್ಗೆ ಧಿಕ್ಕಾರವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಬುಧವಾರ ಸಭೆಯೊಂದರಲ್ಲಿ ಮಾತನಾಡಿದ ಅವರು, ಬಿಜೆಪಿಯ ಅನಂತ ಕುಮಾರ್‌'ಗಿಂತಲೂ ಜೆಡಿಎಸ್‌'ನ ದೇವೇಗೌಡರೇ ನಿಜವಾದ ಹಿಂದೂ, ನಳಿನ್ ಕಟೀಲ್‌'ಗಿಂತಲೂ ಜನಾರ್ದನ ಪೂಜಾರಿ ಹೆಚ್ಚು ಒಳ್ಳೆಯ ಹಿಂದು ಎಂದು ಅಭಿಪ್ರಾಯಪಟ್ಟರು.

ಚಲೇ ಜಾವ್ ಹೇಳಿ:

50 ವರ್ಷಗಳ ಕಾಲ ಆರೆಸ್ಸೆಸ್ ಕಚೇರಿಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸದ ಆರೆಸ್ಸೆಸ್‌'ನವರ ಕಾಲರ್ ಪಟ್ಟಿ ಹಿಡಿದು ನಿನ್ನ ದೇಶ ಪ್ರೇಮ ಯಾವುದು ಎಂದು ಕೇಳುವುದಕ್ಕೆ ಹಿಂಜರಿಯಬಾರದು. ಇಂತಹ ದೇಶದ್ರೋಹಿಗಳನ್ನು ಚಲೇ ಜಾವ್, ದೇಶ ಬಿಟ್ಟು ತೊಲಗಿ ಎಂದು ಹೇಳುವ ಧ್ಯರ್ಯವನ್ನು ಕಾಂಗ್ರೆಸ್ ತೋರಿಸಬೇಕಾಗಿದೆ ಎಂದರು.

ಮಠಗಳಲ್ಲಿ ಕೋಮುವಾದಿಗಳ ನೇಮಕ:

ಧರ್ಮಪೀಠಗಳು ಕೋಮುವಾದಿಗಳ ರಿಕ್ರೂಟ್ಮೆಂಟ್ ಬೋರ್ಡ್‌ಗಳಾಗುತ್ತಿವೆ ಎಂದು ಮಟ್ಟು ಆರೋಪಿಸಿದರು. ಮೊದಲಿನಿಂದಲೂ ನನಗೆ ಕಾಂಗ್ರೆಸ್ ಸಿದ್ಧಾಂತ ಒಪ್ಪಿಗೆ ಇದೆ, ಆದರೆ, ನಾನಿನ್ನೂ ಕಾಂಗ್ರೆಸ್ ಪಕ್ಷ ಸೇರಿಲ್ಲ. ಮುಂದೆ ಸೇರುತ್ತೇನೋ ಇಲ್ಲವೋ ಗೊತ್ತಿಲ್ಲ ಎಂದು ಹೇಳಿದರು.