ತಾವು ಯಾವುದೇ ಸರಕಾರ ಬಂದರೂ ಪ್ರಶ್ನಿಸುವುದನ್ನು ನಿಲ್ಲಿಸುವುದಿಲ್ಲವೆಂದು ಹೇಳಿದ್ದ ನಟ ಚಿಂತಕ ಪ್ರಕಾಶ್ ರೈ, ಚುನಾವಣಾ ಫಲಿತಾಂಶದ ನಂತರ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳನ್ನು ಪ್ರಶ್ನಿಸಿ 'ಏನು ಮಾಡೋಣ?' ಎಂಬ ಹೊಸ ಅಭಿಯಾನವನ್ನು ಆರಂಭಿಸುತ್ತಿದ್ದಾರೆ. ಇದು ಯಾರ ವಿರುದ್ಧ?

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ವೇಳೆ ರಾಜ್ಯಾದ್ಯಂತ ಸಂಚರಿಸಿ, ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ಪ್ರಕಾಶ್ ರೈ #JustAsking ಅಭಿಯಾನ ನಡೆಸಿದ್ದರು. ತಾವು ಯಾವುದೇ ಸರಕಾರ ಬಂದರೂ ಪ್ರಶ್ನಿಸುವುದನ್ನು ನಿಲ್ಲಿಸುವುದಿಲ್ಲವೆಂದು ಹೇಳಿದ್ದ ರೈ, ಇದೀಗ ಕಾಂಗ್ರೆಸ್-ಜೆಡಿಎಸ್ ಒಂದಾಗಿ ಸರಕಾರ ರಚಿಸಲು ಮುಂದಾಗಿದ್ದನ್ನು ಪ್ರಶ್ನಿಸುತ್ತಿದ್ದಾರೆ.

Scroll to load tweet…

'ಸಂವಿಧಾನ ಉಲಿಸಿ,' #JustAsking ನಂತರ 'ಏನು ಮಾಡೋಣ?' ಎಂಬ ನೂತನ ಅಭಿಯಾನಕ್ಕೆ ನಾಂದಿ ಹಾಡುತ್ತಿದ್ದು, ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ಪ್ರಜಾಪ್ರಭುತ್ವವನ್ನು ಅವಮಾನಿಸುತ್ತಿದ್ದಾರೆಂದು ರೈ ಆರೋಪಿಸಿದ್ದಾರೆ.

Scroll to load tweet…

'ನಮ್ಮ ಕ್ಷೇತ್ರದ ಪ್ರತಿನಿಧಿಗಳ ಮೇಲೆ ನಾವಿಟ್ಟ ನಂಬಿಕೆಯನ್ನು, ಇವರು ಇನ್ಯಾರಿಗೋ ಮಾರಿಕೊಳ್ಳುವುದನ್ನು, ಬೇರೆ ದಾರಿಯಿಲ್ಲದೆ ಈ ರಾಜಕಾರಣಿಗಳ ದೊಂಬರಾಟವನ್ನು ನಾವು ಒಪ್ಪಿಕೊಳ್ಳುವಂತೆ ನಮ್ಮ ಮೇಲೆ ಅಭಿಪ್ರಾಯ ಹೇರುವುದನ್ನು ನಾವು ಪ್ರಶ್ನಿಸದಿದ್ದರೆ, ನಮ್ಮ ಈ ಅಸಹಾಯಕತೆಗೆ, ನಮ್ಮ ಅಮಾಯಕತೆ ದುರುಪಯೋಗಕ್ಕೆ, ಯಾರು ಕಾರಣವೆಂದು ನಾವು ಬೇಗ ಗೊತ್ತು ಮಾಡಿಕೊಳ್ಳದಿದ್ದರೆ, ಮತ್ತೊಮ್ಮೆ ಸೋಲುವುದು ನಾವೇ!!' ಎಂದು ರೈ ಹೇಳಿದ್ದಾರೆ.

Scroll to load tweet…

'ಯಾರಿಗೂ ಬಹುಮತ ಬಾರದ ಚುನಾವಣಾ ಫಲಿತಾಂಶದ ನಂತರಬಿಜೆಪಿ, ಕಾಂಗ್ರೆಸ್, ಜೆಡಿಎಸ್...ಎಲ್ಲರೂ ಒಬ್ಬರನ್ನೊಬ್ಬರು ಕೊಳ್ಳುವ-ಮಾರುವ ವ್ಯಾಪಾರಕ್ಕಿಳಿದಿದ್ದಾರೆ. ನಮ್ಮ ಅನುಮತಿಯಿಲ್ಲದೆ, ತಮ್ಮ ಶಕ್ತ್ಯಾನುಸಾರ ದಕ್ಕಿದ್ದನ್ನು ಹಂಚಿಕೊಂಡು, ಭಿನ್ನಾಭಿಪ್ರಾಯಗಳನ್ನು ಮರೆತು, ವಿಧಾನಸೌಧದೊಳಗೆ ಒಂದಾಗಿ ಓಡಾಡುತ್ತ ಮುಂದಿನ ಚುನಾವಣೆವರೆಗೆ ಆರಾಮಾಗಿರುತ್ತಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎದುರು ಕೊನೆಗೂ ಸೋತದ್ದು ನಾವು...' ಎಂದು ಬೇಸರ ವ್ಯಕ್ತಪಡಿಸಿರುವ ರೈ, ಹೊಸ ಅಭಿಯಾವನ್ನು ಆರಂಭಿಸುತ್ತಿದ್ದಾರೆ.