ನಟ ಪ್ರಕಾಶ್ ರೈ ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿನ ಆಗು ಹೋಗುಗಳ ಬಗ್ಗೆ ಪ್ರತಿಕ್ರಿಯಿಸುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಸುದ್ದಿಯಲ್ಲಿ ಇದ್ದಾರೆ. ಇತ್ತೀಚೆಗೆ ತಾಜ್ ಮಹಲ್‌ ಬಗ್ಗೆ ಬಹಳ ಚರ್ಚೆ ನಡೆಯುತ್ತಿದೆ. ಆ ಕಟ್ಟಡ ದೇಗುಲವಾಗಿತ್ತು, ಶಹಜಹಾನ್ ಕಬಳಿಸಿದ ಭೂಮಿಯಲ್ಲಿ ಆ ಕಟ್ಟಡ ಕಟ್ಟಿಸಿದರು ಎಂಬಿತ್ಯಾದಿ ಹೇಳಿಕೆಗಳನ್ನು ಕೆಲವರು ನೀಡುತ್ತಿದ್ದಾರೆ. ಒಂದು ಹಂತದಲ್ಲಿ ಕೆಲವರು ತಾಜ್ ಮಹಲ್‌'ನ್ನು ಕೆಡವಬೇಕು ಎನ್ನುವವರೆಗೆ ಮಾತನಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೈ ಉತ್ತರ ಪ್ರದೇಶ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ವ್ಯಂಗದ ಬಾಣ ಬೀಸಿದ್ದಾರೆ.

ಬೆಂಗಳೂರು(ಅ.24): ನಟ ಪ್ರಕಾಶ್ ರೈ ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿನ ಆಗು ಹೋಗುಗಳ ಬಗ್ಗೆ ಪ್ರತಿಕ್ರಿಯಿಸುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಸುದ್ದಿಯಲ್ಲಿ ಇದ್ದಾರೆ. ಇತ್ತೀಚೆಗೆ ತಾಜ್ ಮಹಲ್‌ ಬಗ್ಗೆ ಬಹಳ ಚರ್ಚೆ ನಡೆಯುತ್ತಿದೆ. ಆ ಕಟ್ಟಡ ದೇಗುಲವಾಗಿತ್ತು, ಶಹಜಹಾನ್ ಕಬಳಿಸಿದ ಭೂಮಿಯಲ್ಲಿ ಆ ಕಟ್ಟಡ ಕಟ್ಟಿಸಿದರು ಎಂಬಿತ್ಯಾದಿ ಹೇಳಿಕೆಗಳನ್ನು ಕೆಲವರು ನೀಡುತ್ತಿದ್ದಾರೆ. ಒಂದು ಹಂತದಲ್ಲಿ ಕೆಲವರು ತಾಜ್ ಮಹಲ್‌'ನ್ನು ಕೆಡವಬೇಕು ಎನ್ನುವವರೆಗೆ ಮಾತನಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೈ ಉತ್ತರ ಪ್ರದೇಶ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ವ್ಯಂಗದ ಬಾಣ ಬೀಸಿದ್ದಾರೆ.

Add Asianetnews Kannada as a Preferred SourcegooglePreferred

ವಿಶ್ವದ ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್‌ ಭವಿಷ್ಯದ ದಿನಗಳಲ್ಲಿ ಇತಿಹಾಸ ಆಗಿ ಹೋಗುತ್ತಾ ಎಂದು ಟ್ವಿಟ್ಟರ್‌'ನಲ್ಲಿ ಪ್ರಶ್ನಿಸಿರುವ ರೈ, 'ನೀವು ತಾಜ್ ಮಹಲ್‌'ನ ಬುನಾದಿ ಅಗೆಯುತ್ತಿದ್ದೀರಿ. ಯಾವಾಗ ಆ ಕಟ್ಟಡ ಉರುಳಿಸ್ತೀರಿ ಹೇಳಿ. ನನ್ನ ಮಕ್ಕಳಿಗೆ ಆ ಅದ್ಭುತ ಕಟ್ಟಡವನ್ನು ಕೊನೆಯದಾಗಿ ತೋರಿಸಲು ಬಯಸುತ್ತಿದ್ದೇನೆ' ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

Scroll to load tweet…