ಮೇಲ್ವರ್ಗದ ಬಡವರಿಗೆ ಶೇ. 10 ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅಂಕಿತ ಹಾಕಿದ್ದಾರೆ.

ನವದೆಹಲಿ, [ಜ.12]: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಶೇ. 10 ಮೀಸಲಾತಿ ಕಲ್ಪಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಂವಿಧಾನ ತಿದ್ದುಪಡಿ ಮಸೂದೆಗೆ ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿತ್ತು. ನಂತರ ಮಸೂದೆಯನ್ನು ರಾಷ್ಟ್ರಪತಿ ಅಂಕಿತಕ್ಕಾಗಿ ರಾಷ್ಟ್ರಪತಿ ಭವನಕ್ಕೆ ಕಳುಹಿಸಲಾಗಿತ್ತು. ಅದರಂತೆ [ಇಂದು] ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಸೂದೆಗೆ ಅಂಕಿತ ಹಾಕಿದ್ದಾರೆ.

ಮೇಲ್ವರ್ಗ ಮೀಸಲಾತಿ ಪಡೆಯಲು 3 ಮಾನದಂಡಗಳು, ಯಾರಿಗೆ ಲಾಭ? ಇಲ್ಲಿದೆ ಮಾಹಿತಿ

ಚಳಿಗಾಲದ ಸಂಸತ್​ ಅಧಿವೇಶನದ ವೇಳೆ ಪ್ರಧಾನಿ ಮೋದಿ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಯುವಕರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.10 ಮೀಸಲಾತಿಯ ಮಸೂದೆ ಕುರಿತ ನಿರ್ಣಯವನ್ನು ಕೈಗೊಂಡಿದ್ದರು. 

ಈ ಮೀಸಲಾತಿಗೆ ಕೆಲ ವಿರೋಧ ಪಕ್ಷಗಳ ನಾಯಕರು ಬೆಂಬಲ ಸೂಚಿಸಿದ್ದು, ಬಳಿಕ ರಾಜ್ಯಸಭೆಯಲ್ಲೂ ಈ ಮಸೂದೆ ಪಾಸ್ ಆಗಿತ್ತು.