ರಾಮಮಂದಿರರ ನಿರ್ಮಾಣ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಕಾನೂನು ಪ್ರಕ್ರಿಯೆ ಮುಗಿದ ಬಳಿಕವಷ್ಟೇ ಸುಗ್ರೀವಾಜ್ಞೆ ಹೊರತರುವ ವಿಚಾರ ಪರಿಗಣಿಸಲಾಗುವುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ನವದೆಹಲಿ : ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ ಮಾಡಲು ಸುಗ್ರೀವಾಜ್ಞೆ ಹೊರಡಿಸಬೇಕು ಎಂಬ ಸಂಘ ಪರಿವಾರದ ಸಂಘಟನೆಗಳ ಆಗ್ರಹ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಕಾನೂನು ಪ್ರಕ್ರಿಯೆ (ಸುಪ್ರೀಂ ಕೋರ್ಟ್ ವಿಚಾರಣೆ) ಮುಗಿದ ಬಳಿಕವಷ್ಟೇ ಸುಗ್ರೀವಾಜ್ಞೆ ಹೊರತರುವ ವಿಚಾರ ಪರಿಗಣಿಸಲಾಗುವುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಕಾಂಗ್ರೆಸ್ಸಿನ ವಕೀಲರು ಅಡ್ಡಿ ಉಂಟು ಮಾಡುತ್ತಿರುವುದರಿಂದಾಗಿ ನ್ಯಾಯಾಂಗ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದೂ ಆರೋಪಿಸಿದ್ದಾರೆ. ಎನ್ಐ ಸುದ್ದಿಸಂಸ್ಥೆಗೆ ವಿವಿಧ ವಿಷಯಗಳ ಬಗ್ಗೆ ಸುದೀರ್ಘ 90 ನಿಮಿಷಗಳ ಸಂದರ್ಶನ ನೀಡಿರುವ ಮೋದಿ ಅವರು, ರಾಮಮಂದಿರ ಕುರಿತ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ.
‘ರಾಮಮಂದಿರ ವಿಚಾರ ಬಿಜೆಪಿಗೆ ಸದ್ಯ ಭಾವನಾತ್ಮಕ ವಿಷಯವಾಗಷ್ಟೇ ಉಳಿದಿದೆಯೇ’ ಎಂಬ ಪ್ರಶ್ನೆಗೆ, ‘ಸಂವಿಧಾನದ ವ್ಯಾಪ್ತಿಯೊಳಗೆ ರಾಮಮಂದಿರ ವಿವಾದಕ್ಕೆ ಪರಿಹಾರ ಕಂಡುಹಿಡಿಯುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲೇ ಹೇಳಿದ್ದೇವೆ. ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದೆ. ಅದೂ ಕೊನೆಯ ಹಂತದಲ್ಲಿದೆ. ಕಾನೂನು ಪ್ರಕ್ರಿಯೆಗಳು ಮುಗಿಯಲಿ. ಅನಂತರ ಸರ್ಕಾರವಾಗಿ ನಮ್ಮ ಮೇಲೆ ಏನು ಜವಾಬ್ದಾರಿ ಇದೆಯೋ, ಅದನ್ನು ಕಾರ್ಯಸಾಧ್ಯವಾಗಿಸಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತೇವೆ’ ಎಂದು ಹೇಳಿದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 2, 2019, 7:57 AM IST