ಸಿನಿಮೀಯ ರೀತಿಯಲ್ಲಿ ಆಸ್ಪತ್ರೆಯಿಂದ ಕೈದಿಯೊಬ್ಬ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ನಿವಾಸಿ ಗಣೇಶ್ (ಗಣಪತಿ) ತಪ್ಪಿಸಿಕೊಂಡ ಖೈದಿ.
ಕೊಡಗು (ಜ.01): ಸಿನಿಮೀಯ ರೀತಿಯಲ್ಲಿ ಆಸ್ಪತ್ರೆಯಿಂದ ಕೈದಿಯೊಬ್ಬ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ನಿವಾಸಿ ಗಣೇಶ್ (ಗಣಪತಿ) ತಪ್ಪಿಸಿಕೊಂಡ ಖೈದಿ.
ಸುಂಟಿಕೊಪ್ಪದಲ್ಲಿ ನಡೆದ ಕಳವು ಪ್ರಕರಣದಲ್ಲಿ ಗಣೇಶ್ ಜೈಲು ಸೇರಿದ್ದರು. ಡಿ.30 ರಂದು ಪಿನಾಯಿಲ್ ಸೇವಿಸಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 10 ಗಂಟೆ ವೇಳೆಗೆ ಆಸ್ಪತ್ರೆಯ ಕಿಟಕಿಯ ಮೂಲಕ ಪರಾರಿಯಾಗಿದ್ದಾರೆ. ಗಣೇಶ್'ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
