ಅಧಿಕಾರದ ದರ್ಪವೋ ಅಥವಾ ವ್ಯವಸ್ಥೆಯ ಬಗ್ಗೆ ಆಕ್ರೋಶವೋ ಗೊತ್ತಿಲ್ಲ. ಆದರೆ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಭರದಲ್ಲಿ ಜನಪ್ರತಿನಿಧಿಗಳು ತಮ್ಮ ನಾಲಿಗೆಯ ಮೇಲಿನ ಹಿಡಿತವನ್ನು ಕಳೆದುಕೊಳ್ಳುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಲಕ್ನೋ(ಜೂ.6): ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ವಾಸಿ ಎಂದು ಹೇಳುವ ಮೂಲಕ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಭಾರೀ ವಿವಾದ ಸೃಷ್ಟಿಸಿದ್ದಾರೆ. ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಸಾರ್ವಜನಿಕ ಸಭೆಯಲ್ಲಿ ಈ ರೀತಿ ಬಹಿರಂಗ ಹೇಳಿಕೆ ನೀಡುವ ಮೂಲಕ ಸಭ್ಯತೆಯ ಎಲ್ಲೆ ಮೀರಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸುರೇಂದ್ರ ಸಿಂಗ್, ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರು ಉತ್ತಮ. ವೇಶ್ಯೆಯರು ಕೆಲಸವಾಧ ಮೇಲೆ ನಮ್ಮಿಂದ ಹಣ ಪಡೆಯುತ್ತಾರೆ. ಆದರೆ ಈ ಸರ್ಕಾರಿ ಅಧಿಕಾರಿಗಳು ನಮ್ಮಿಂದ ಹಣ ತೆಗೆದುಕೊಂಡ ನಂತರವೂ ಕೆಲಸ ಮಾಡುವುದಿಲ್ಲ ಎಂದು ಕುಹುಕವಾಡಿದ್ದಾರೆ.

ಇನ್ನು ಸುರೇಂದ್ರ ಸಿಂಗ್ ಈ ರೀತಿಯ ಹೇಳಿಕೆ ನೀಡಿದ್ದು ಇದೇ ಮೊದಲಲ್ಲ. ಕಳೆದ ಫೆಬ್ರುವರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿಂಗ್, ‘ಭಾರತ್‌ ಮಾತಾ ಕಿ ಜೈ’, ‘ವಂದೇ ಮಾತರಂ’ ಎನ್ನದವರಿಗೆ ಈ ದೇಶದಲ್ಲಿ ವಾಸಿಸಲು ಯಾವುದೇ ಹಕ್ಕಿಲ್ಲ, ‌ಇಂಥ ಜನರು ರಾಜಕೀಯ ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಹೇಳಿದ್ದರು.