ಈ ಕಸದಿಂದ ಸಾರ್ವಜನಿಕರು, ರೈತರು ಹೂ ಮಾರುಕಟ್ಟೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಸ ಹೆಚ್ಚಾಗುತ್ತಿದ್ದರೂ ನಗರಸಭೆ ಅಥವಾ ಜಿಲ್ಲಾಡಳಿತವಾಗಲಿ ತೆರವಿಗೆ ಪ್ರಯತ್ನಿಸುತ್ತಿಲ್ಲ.

ಕೋಲಾರ(ಅ.13): ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕಸವನ್ನು ಮೂಟೆಗಳಲ್ಲಿ ತುಂಬಿಕೊಂಡು ಜಿಲ್ಲಾ ಪಂಚಾಯಿತಿ ವರೆಗೆ ಕಾಲ್ನಡಿಗೆ ಜಾಥಾದೊಂದಿಗೆ ಬಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದರು.

Add Asianetnews Kannada as a Preferred SourcegooglePreferred

ಈ ಕಸದಿಂದ ಸಾರ್ವಜನಿಕರು, ರೈತರು ಹೂ ಮಾರುಕಟ್ಟೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಸ ಹೆಚ್ಚಾಗುತ್ತಿದ್ದರೂ ನಗರಸಭೆ ಅಥವಾ ಜಿಲ್ಲಾಡಳಿತವಾಗಲಿ ತೆರವಿಗೆ ಪ್ರಯತ್ನಿಸುತ್ತಿಲ್ಲ.

ಸಮಯಕ್ಕೆ ವಿಲೇವಾರಿ ಮಾಡುವಂತೆ ನಗರಸಭೆ ಹಾಗೂ ಸದಸ್ಯರಿಗೆ ಮನವಿ ಮಾಡಿದ್ದರೂ ಏನೂ ಪ್ರಯೋಜನವಾಗಿಲ್ಲ. ಮಾರುಕಟ್ಟೆ ಸಮೀಪ ಸಂಗ್ರಹವಾಗಿರುವ ಕಸದ ರಾಶಿಯನ್ನು ಕೂಡಲೇ ವಿಲೇವಾರಿ ಮಾಡಿ ನಗರದ ನೈರ್ಮಲ್ಯ ಕಾಪಾಡುವ ಅನಿವಾರ್ಯತೆ ಹೆಚ್ಚಾಗಿದೆ. ಇಲ್ಲವಾದಲ್ಲಿ ನಗರದಲ್ಲಿ ರೋಗರುಜಿನಗಳು ಹೆಚ್ಚಾಗುತ್ತದೆ ಎಂದು ತಿಳಿಸಿದರು. ಈ ಬಗ್ಗೆ ಗಮನ ಹರಿಸಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕೆಂದು ಆರೋಗ್ಯ ಸಚಿವ ರಮೇಶ್​ಕುಮಾರ್​ ಅವರಿಗೆ ಮನವಿ ಮಾಡಿದರು.

(ಸಾಂದರ್ಭಿಕ ಚಿತ್ರ)