1 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ ಪರಿಣಾಮ ಒಂದು ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.
ಬೆಂಗಳೂರಿನ ಬನ್ನೇರುಘಟ್ಟ ಮುಖ್ಯರಸ್ತೆಯನ್ನು ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಇಂದು ಬೃಹತ್ ಪ್ರತಿಭಟನೆ ನಡೆಸಿದರು, ಬನ್ನೇರುಘಟ್ಟ ರಸ್ತೆಯ ಅರಕೆರೆ ಸಿಗ್ನಲ್ ನಿಂದ ಐಐಎಂಬಿ ಸಿಗ್ನಲ್ವರೆಗೆ ಪಾದಯಾತ್ರೆ ನಡೆಸಿದರು. 1 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ ಪರಿಣಾಮ ಒಂದು ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ವಾಹನ ಸವಾರರ ನಡುವೆ ಮಾತಿನ ಚಕಮಕಿ ನಡೆಯಿತು. 12 ವರ್ಷಗಳ ಹಿಂದೆಯೇ ಗುದ್ದಲಿ ಪೂಜೆ ನೆರವೇರಿಸಿದರೂ, ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಿಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿದರು.
