ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿ ಪಿಎಸ್ಐ ಶಿವಶಂಕರ ಮುಕರಿಯ ದರ್ಪ ಬಯಲಾಗಿದೆ. ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಪಿಎಸ್ಐ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ.
ಬೆಳಗಾವಿ (ಮಾ.19): ಬಾರ್ ಮ್ಯಾನೇಜರ್ ಮೇಲೆ ಪಿಎಸ್'ಐ ಯದ್ವಾತದ್ವಾ ಹಲ್ಲೆ ನಡೆಸಿ ದರ್ಪ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆಗೆ ಎಸ್ಪಿ ರವಿಕಾಂತೇಗೌಡ ಆದೇಶಿಸಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿ ಪಿಎಸ್ಐ ಶಿವಶಂಕರ ಮುಕರಿಯ ದರ್ಪ ಬಯಲಾಗಿದೆ. ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಪಿಎಸ್ಐ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ.

ಮಾರ್ಚ್ 13 ರಂದು ಬೆಳಗಾವಿಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಮದ್ಯ ನಿಷೇಧ ಇತ್ತು. ಅಂದು ರಾತ್ರಿ ಕುಡಚಿಯ ಶಿವಶಕ್ತಿ ಬಾರ್'ಗೆ ನುಗ್ಗಿದ ಪಿಎಸ್'ಐ ಶಿವಶಂಕರ, ಪೇದೆಗಳಾದ ಪೂಜಾರಿ, ಎಚ್.ಡಿ ಬೋಜನ್ನವರ್, ಮ್ಯಾನೇಜರ್ ಅಜಿತ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ.

ನಿಷೇಧ ಇದ್ದರೂ ಮದ್ಯ ಹಾಗೂ ಮಾಮೂಲಿ ನೀಡುವಂತೆ ಕೇಳಿದ್ದಾರೆ. ಆದರೆ ಮದ್ಯ ನೀಡಲು ನಿರಾಕರಿಸಿದ್ದರಿಂದ ಪಿಎಸ್'ಐ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
