ಕಳೆದ 3 ದಿನಗಳಿಂದ ನಗರದ ಹಲವೆಡೆ ಸಂಚಾರಿ ಪೊಲೀಸರು ಹೆಲ್ಮೆಟ್ ತಪಾಸಣೆ ತೀವ್ರಗೊಳಿಸಿದ್ದು, ಬುಧವಾರ ಬೆಳಗ್ಗೆ 11 ಗಂಟೆ ಸಮಯದಲ್ಲಿ ಸಂಚಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಯುವತಿಯನ್ನು ಏಕವಚನದಲ್ಲಿ ನಿಂದಿಸಿದ್ದಾರೆ. ಇದರಿಂದ ನೊಂದ ಯುವತಿ ಪೊಲೀಸರ ನಡೆದುಕೊಂಡ ರೀತಿಯನ್ನು ಪೋಷಕರಿಗೆ ವಿವರಿಸಿದ್ದಾಳೆ.

ಭದ್ರಾವತಿ(ನ.22): ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುತ್ತಿದ್ದ ಯುವತಿಯೊಬ್ಬಳಿಗೆ ಸಂಚಾರಿ ಪೊಲೀಸರು ಏಕವಚನದಲ್ಲಿ ನಿಂದಿಸಿದ್ದಾರೆಂದು ಆರೋಪಿಸಿ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ದಿಢೀರ್ ಪ್ರತಿಭಟನೆ ನಡೆಸಲಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ 3 ದಿನಗಳಿಂದ ನಗರದ ಹಲವೆಡೆ ಸಂಚಾರಿ ಪೊಲೀಸರು ಹೆಲ್ಮೆಟ್ ತಪಾಸಣೆ ತೀವ್ರಗೊಳಿಸಿದ್ದು, ಬುಧವಾರ ಬೆಳಗ್ಗೆ 11 ಗಂಟೆ ಸಮಯದಲ್ಲಿ ಸಂಚಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಯುವತಿಯನ್ನು ಏಕವಚನದಲ್ಲಿ ನಿಂದಿಸಿದ್ದಾರೆ. ಇದರಿಂದ ನೊಂದ ಯುವತಿ ಪೊಲೀಸರ ನಡೆದುಕೊಂಡ ರೀತಿಯನ್ನು ಪೋಷಕರಿಗೆ ವಿವರಿಸಿದ್ದಾಳೆ.

ಯುವತಿಯ ತಂದೆ ಕುವೆಂಪು ಪ್ರವಾಸಿ ವಾಹನ ಚಾಲಕ-ಮಾಲೀಕರ ಸಂಘದ ಅಧ್ಯಕ್ಷ ಡಿ. ರಾಜು ಮತ್ತು ತಾಯಿ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಸುಕನ್ಯಾ ತಮ್ಮ ಬೆಂಬಲಿಗರೊಂದಿಗೆ ಏಕಾಏಕಿ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕೆಲ ಸಮಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಉಪಾಧೀಕ್ಷಕ ಶಿವಕುಮಾರ್ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಅಂತ್ಯಗೊಂಡಿತು.