Asianet Suvarna News Asianet Suvarna News

'44ಯೋಧರನ್ನ ಬಲಿಕೊಟ್ಟು, 22 ಸ್ಥಾನ ಗೆಲ್ಲುವುದು ಬಿಜೆಪಿಯ ಸ್ಟ್ರಾಟಜಿ'

 ಭಾರತೀಯ ವಾಯುಸೇನೆಯು ಉಗ್ರರ ನೆಲೆಯನ್ನು ಧ್ವಂಸಗೊಳಿಸಿರುವುದನ್ನ ರಾಜಕೀಯವಾಗಿ ಬಳಸಿಕೊಂಡ ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್.ಯಡಿಯೂರಪ್ಪಗೆ ಛೀಮಾರಿ ಹಾಕುತ್ತಿದ್ದಾರೆ.

Pulwama attack Revenge BJP Election strategy Says priyank kharge
Author
Bengaluru, First Published Mar 2, 2019, 4:01 PM IST

ಚಾಮರಾಜನಗರ, (ಮಾ.02): 44ಯೋಧರನ್ನ ಬಲಿಕೊಟ್ಟು, 22 ಸ್ಥಾನ ಗೆಲ್ಲುವುದು  ಬಿಜೆಪಿಯವರ  ಮನಸ್ಸಿನಲ್ಲಿತ್ತು. ಇದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ  ಮೂಲಕ ಅದು ಬೆಳಕಿಗೆ ಬಂದಿದೆ ಎಂದು ಸಮಾಜ ಕಲ್ಯಾಣ ಸಚಿವ  ಪ್ರಿಯಾಂಕ ಖರ್ಗೆ ಲೇವಡಿ ಮಾಡಿದ್ದಾರೆ.

"

#AirStrike ನಿಂದ ಬಿಜೆಪಿಗೆ 22 ಸೀಟು ಖಚಿತ: ಯಡಿಯೂರಪ್ಪಗೆ ಛೀಮಾರಿ

(ಇಂದು) ಶನಿವಾರ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟಕ್ಕೆ  ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಭಾಗವಹಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಆಪರೇಷನ್ ಕಮಲ ಮಾಡಿದ್ದು ಬಹಿರಂಗವಾಗಿದೆ.

 ಬಿ.ಎಸ್. ಯಡಿಯೂರಪ್ಪ ರವರು ಸ್ಪೀಕರ್, ಜಡ್ಜಗಳನ್ನ ಬುಕ್ ಮಾಡಿದ್ದೇವೆ  ಎಂಬ ಆಡಿಯೋದಲ್ಲಿದ್ದ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರು ಈ ಎಲ್ಲಾ ಷಡ್ಯಂತ್ರಗಳನ್ನ ಚುನಾವಣೆ ಸಮೀಪದಲ್ಲಿ  ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.  

Follow Us:
Download App:
  • android
  • ios