ಪುಲ್ವಾಮಾದಲ್ಲಿ ಉಗ್ರರ ದಾಳಿ ಬೆನ್ನಲ್ಲೇ CRPF ನಲ್ಲಿ ಕೆಲವು ಬದಲಾವಣೆಗಳನ್ನು ತರಲಾಗುತ್ತಿದೆ.  ಮುನ್ನೆಚ್ಚರಿಕಾ ಕ್ರಮವಾಗಿ ಪಡೆಯಲ್ಲಿನ ಹಲವು ರೀತಿಯ ನಿರ್ವಹಣಾ ಕ್ರಮಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ.  

ನವದೆಹಲಿ : ಪುಲ್ವಾಮದಲ್ಲಿ ಭೀಕರ ಉಗ್ರ ದಾಳಿ ನಡೆದು 44 ಯೋಧರು ಹುತಾತ್ಮರಾದ ಬೆನ್ನಲ್ಲೇ ಇದೀಗ CRPF ಭದ್ರತೆಯನ್ನು ಉನ್ನತೀಕರಿಸಲು ನಿರ್ಧರಿಸಿದೆ. 

Add Asianetnews Kannada as a Preferred SourcegooglePreferred

CRPF ಪಡೆಯ ನಿರ್ವಹಣಾ ವ್ಯವಸ್ಥೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಹೊಸ ರೀತಿಯ ನೀತಿ ನಿಯಮಗಳು ಜಾರಿ ಜಾರಿ ತರಲಾಗುತ್ತದೆ ಎಂದು CRPF ಡೈರೆಕ್ಟರ್ ಜನರಲ್ ಆರ್ ಆರ್ ಭಟ್ನಾಗರ್ ಹೇಳಿದ್ದಾರೆ. 

ಪುಲ್ವಾಮದಲ್ಲಿ ದಾಳಿ ನಡೆದ ಬೆನ್ನಲ್ಲೇ ಕಾಶ್ಮೀರದಲ್ಲಿ 2 ದಿನಗಳ ಪ್ರವಾಸ ಕೈಗೊಂಡಿದ್ದು, ಟ್ರಾಫಿಕ್ ಕಂಟ್ರೋಲ್, ಸೇನಾ ಸಂಚಾರದ ಸಮಯ ಬದಲಾವಣೆ, ಉಳಿದುಕೊಳ್ಳುವ ಸ್ಥಳಗಳ ಬದಲಾವಣೆ ಸೇರಿದಂತೆ ವಿವಿಧ ರೀತಿಯ ಬದಲಾವಣೆ ಮಾಡಲಾಗುತ್ತದೆ ಎಂದರು. 

2 ಪಡೆಗಳು ಲಾಟೂಮೋಡ್ ಮತ್ತು ಪುಲ್ವಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಪರೀಕ್ಷಾರ್ಥವಾಗಿ ಇಲ್ಲಿ ಬದಲಾವಣೆಯ ನಿಯಮಗಳನ್ನು ಜಾರಿ ತರಲಾಗುತ್ತದೆ. ಜಮ್ಮು ಕಾಶ್ಮೀರದಲ್ಲಿ ಸೇನಾ ಪಡೆ ವಾಹನಗಳು ಸಂಚರಿಸುವಾಗಿ ಯಾವುದೇ ನಾಗರಿಕರ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.