Asianet Suvarna News Asianet Suvarna News

ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ರಾಹುಲ್ ಮೊದಲ ಭೇಟಿ ಕರ್ನಾಟಕಕ್ಕೆ

ಎಐಸಿಸಿ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆಯಾದ ಬಳಿಕ ಮೊತ್ತಮೊದಲು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಪ್ರವಾಸಕ್ಕೆ ಸೂಕ್ತ ಸಿದ್ಧತೆ ನಡೆಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್‌ಗೆ ಸೂಚನೆ ನೀಡಿದ್ದಾರೆ.

Rahul Gandhi First visit to karnataka

ಬೆಂಗಳೂರು(ಡಿ.7): ಎಐಸಿಸಿ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆಯಾದ ಬಳಿಕ ಮೊತ್ತಮೊದಲು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಪ್ರವಾಸಕ್ಕೆ ಸೂಕ್ತ ಸಿದ್ಧತೆ ನಡೆಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್‌ಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ರಾಜ್ಯದಲ್ಲಿ ಬಿಜೆಪಿ ಓಟಕ್ಕೆ ಕಡಿವಾಣ ಹಾಕಲು 15 ಅಗ್ರ ನಾಯಕರೊಂದಿಗೆ ತಡರಾತ್ರಿವರೆಗೆ ಗುಪ್ತ ಸಭೆ ನಡೆಸಿದ ಕೆ.ಸಿ.ವೇಣುಗೋಪಾಲ್, ಎಐಸಿಸಿ ಅಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ರಾಹುಲ್ ಗಾಂಧಿ ಆಯ್ಕೆಯಾಗಿ ಡಿ.19ರ ನಂತರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದಾಗುತ್ತಿದ್ದಂತೆಯೇ ದೇಶಾದ್ಯಂತ ಪರ್ಯಟನೆ ನಡೆಸಲಿರುವ ಅವರು ಮೊದಲಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

Follow Us:
Download App:
  • android
  • ios