Asianet Suvarna News Asianet Suvarna News

ರಾಹುಲ್ ಗಾಂಧಿ ಮೋದಿ ವಿರುದ್ಧ ಆರೋಪ ಮಾಡುವ ಮುನ್ನ 2 ಜಿ ಕಲ್ಲಿದ್ದಲು ಹಗರಣದ ಬಗ್ಗೆ ಮಾತನಾಡಲಿ

ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ವಿರುದ್ಧ ಆಧಾರರಹಿತ ಆರೋಪ ಮಾಡುವ ಮುನ್ನ 2 ಜಿ ಸ್ಪೆಕ್ಟ್ರಂ ಹಗರಣ ಮತ್ತು ಕಲ್ಲಿದ್ದಲು ಹಗರಣದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಂವಹನ ಮತ್ತು ಮಾಹಿತಿ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

Rahul Gandhi Should Speak Up on 2G Scam and coal scam says Ravishankar Prasad

ನವದೆಹಲಿ (ಡಿ. 27): ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ವಿರುದ್ಧ ಆಧಾರರಹಿತ ಆರೋಪ ಮಾಡುವ ಮುನ್ನ 2 ಜಿ ಸ್ಪೆಕ್ಟ್ರಂ ಹಗರಣ ಮತ್ತು ಕಲ್ಲಿದ್ದಲು ಹಗರಣದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಂವಹನ ಮತ್ತು ಮಾಹಿತಿ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡು ಪ್ರಧಾನಿ ಮೋದಿ ಘೋಷಿಸಿದ ನೋಟು ನಿಷೇಧವು ವಿಫಲವಾಗಿದೆ. ಜನರು ಈ ಕ್ರಮದಿಂದ ನರಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರವಿಶಂಕರ್ ಪ್ರಸಾದ್, ವೃಥಾ ಆರೋಪ ಮಾಡುವುದು ಸರಿಯಲ್ಲ. 2 ಜಿ ಸ್ಪ್ರೆಕ್ಟ್ರಂ ಹಾಗೂ ಕಲ್ಲಿದ್ದಲು ಹಗರಣದ ಬಗ್ಗೆ ಮಾತನಾಡಿ ಎಂದು ರಾಹುಲ್ ಗೆ ಪ್ರಶ್ನಿಸಿದ್ದಾರೆ.

ಇದೇ ವೇಲೆ ಪ್ರಧಾನಿ ಮೋದಿಯವರ ಬಗ್ಗೆ ಆರೋಪಿಸಿದ ಮಾಯಾವತಿಯರಿಗೂ ಚುರುಕು ಮುಟ್ಟಿಸಿದ್ದಾರೆ. ತಾನು ಮಾಡಿರುವ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಮಾಯಾವತಿಯವರು ದಲಿತ ಕಾರ್ಡ್ ಗಳಲ್ಲಿ ಬಳಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

 

 

Follow Us:
Download App:
  • android
  • ios