ಎಐಸಿಸಿ ಸಭೆಯ ಆರಂಭದಲ್ಲಿಯೇ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.   ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ ಅವರು ದೇಶವನ್ನು ಬಿಜೆಪಿ ವಿಭಜನೆ ಮಾಡುತ್ತಿದೆ ಎಂದು ಹೇಳಿದರು.

ನವದೆಹಲಿ : ಎಐಸಿಸಿ ಸಭೆಯ ಆರಂಭದಲ್ಲಿಯೇ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ ಅವರು ದೇಶವನ್ನು ಬಿಜೆಪಿ ವಿಭಜನೆ ಮಾಡುತ್ತಿದೆ ಎಂದು ಹೇಳಿದರು.

Add Asianetnews Kannada as a Preferred SourcegooglePreferred

ಅಲ್ಲದೇ ಬಿಜೆಪಿಯಿಂದ ದೇಶದ ಏಕತೆಯನ್ನು ಒಡೆಯುವ ರಾಜಕಾರಣ ನಡೆಯುತ್ತಿದೆ. ದೇಶದಲ್ಲಿ ಸದ್ಯ ನಿರುದ್ಯೋಗ, ರೈತರ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ ಎಂದು ಅವರು ಹೇಳಿದರು. ದೇಶವನ್ನು ಮುನ್ನೆಲೆಗೆ ತರುವಲ್ಲಿ ಕಾಂಗ್ರೆಸ್ ಪಕ್ಷವೊಂದರಿಂದಲೇ ಸಾಧ್ಯ ಎಂದು ಈ ವೇಳೆ ಹೇಳಿದರು. ಅಲ್ಲದೇ ದೇಶದಲ್ಲಿ ಜಾತಿ ಮತಗಳನ್ನು ವಿಭಜಿಸದೇ ಆಡಳಿತ ನಡೆಸುವುದೂ ಕೂಡ ಕಾಂಗ್ರೆಸ್ ಪಕ್ಷವೊಂದೇ ಎಂದು ಈ ವೇಳೆ ಹೇಳಿದರು.

ಜನರ ಬಗ್ಗೆ ಬಿಜೆಪಿ ಸಿಟ್ಟು ಪ್ರದರ್ಶನ ಮಾಡಿದರೆ, ನಾವು ಪ್ರೀತಿಯನ್ನು ಹಂಚಿಕೆ ಮಾಡುತ್ತೇವೆ. ಇದೇ ಬಿಜೆಪಿಗೂ ನಮಗೂ ಇರುವ ವ್ಯತ್ಯಾಸವಾಗಿದೆ ಎಂದು ಈ ವೇಳೆ ರಾಹುಲ್ ಗಾಂಧಿ ಹೇಳಿದರು. ದೇಶವನ್ನು ಮನ್ನಡೆಗೆ ತರುವ ಸಾಮರ್ಥ್ಯ ಕಾಂಗ್ರೆಸ್ ಪಕ್ಷಕ್ಕೇ ಮಾತ್ರವೇ ಇದೆ ಎಂದು ಅವರು ಹೇಳಿದರು.