Asianet Suvarna News Asianet Suvarna News

'ಮೋದಿಜೀ, ನೀವು ಕಾವಲುಗಾರರಾಗಿದ್ದಿರೋ ಅಥವಾ ಪಾಲುದಾರನಾಗಿದ್ದೀರೋ?'

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಶಾ ಕಂಪನಿಯ ವ್ಯವಹಾರಕ್ಕೆ ಸಂಬಂಧಿಪಟ್ಟಂತೆ ‘ಏನಾದರೂ ಹೇಳಿ’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸವಾಲೆಸೆದಿದ್ದಾರೆ.

Rahul Gandhi Wants Modi to  Break Silence Over Amit Shah Son

ನವದೆಹಲಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಶಾ ಕಂಪನಿಯ ವ್ಯವಹಾರಕ್ಕೆ ಸಂಬಂಧಿಪಟ್ಟಂತೆ ‘ಏನಾದರೂ ಹೇಳಿ’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸವಾಲೆಸೆದಿದ್ದಾರೆ.

ಮೋದಿಜೀ, ನೀವು ಕಾವಲುಗಾರರಾಗಿದ್ದಿರೋ ಅಥವಾ ಪಾಲುದಾರನಾಗಿದ್ದೀರೋ?  ದಯಮಾಡಿ ಏನಾದರೂ ಹೇಳಿ... ಎಂದು ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.

मोदीजी, जय शाह- 'जादा' खा गया|
आप चौकीदार थे या भागीदार? कुछ तो बोलिए

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಜಯ್ ಶಾ ಕಂಪನಿಯು ಒಂದೇ ವರ್ಷದಲ್ಲಿ 16 ಸಾವಿರ ಪಟ್ಟು ವ್ಯವಹಾರ ವೃದ್ಧಿಸಿಕೊಂಡಿದೆ ಎಂದು ‘ದಿ ವೈರ್’ ಸುದ್ದಿತಾಣವು ವಿಸ್ತೃತ ವರದಿ ಪ್ರಕಟಿಸಿತ್ತು.

ವರದಿ ಬಹಿರಂಗಪಡಿಸಿರುವ ವಿಷಯಗಳ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ.

ಏನಿದು ಪ್ರಕರಣ?
ಜಯ್ ಶಾ ಅವರ ಮಾಲಕತ್ವದ ಟೆಂಪಲ್ ಎಂಟರ್'ಪ್ರೈಸ್ ಸಂಸ್ಥೆ ಆರಂಭಗೊಂಡಿದ್ದು 2004ರಲ್ಲಿ. ಜಯ್ ಶಾ ಮತ್ತು ಜಿತೇಂದ್ರ ಶಾ ಅವರು ಈ ಸಂಸ್ಥೆಯ ನಿರ್ದೇಶಕರು. ಕೃಷಿ ಉತ್ಪನ್ನ ಸೇರಿದಂತೆ ಹೋಲ್'ಸೇಲ್ ಆಮದು ಮತ್ತು ರಫ್ತು ನಡೆಸುವುದು ಸಂಸ್ಥೆಯ ವ್ಯವಹಾರ. 2013-14ರವರೆಗೂ ಟೆಂಪಲ್ ಎಂಟರ್'ಪ್ರೈಸ್ ಸಂಸ್ಥೆಗೆ ಯಾವುದೇ ಸ್ಥಿರಾಸ್ತಿ ಇರಲಿಲ್ಲ. 2013 ಮತ್ತು 2014ರ ಹಣಕಾಸು ವರ್ಷಗಳಲ್ಲಿ ಸಂಸ್ಥೆಯು 6,230 ಮತ್ತು 1,724 ರೂಪಾಯಿ ನಷ್ಟ ಕೂಡ ಅನುಭವಿಸಿತ್ತು. 2014-15ರ ವರ್ಷದಲ್ಲಿ ಅದರ ಆದಾಯವು 50 ಸಾವಿರ ರೂಪಾಯಿ ಇತ್ತು. ಆದರೆ, 2015-16ರ ವರ್ಷದಲ್ಲಿ ಆದಾಯ ಪ್ರಮಾಣ ಏಕ್'ದಂ 80.5 ಕೋಟಿ ರೂಪಾಯಿಗೆ ಏರಿಕೆಯಾಯಿತು. ಹೆಚ್ಚೂಕಡಿಮೆ 16 ಸಾವಿರ ಪಟ್ಟು ದಿಢೀರ್ ಏರಿಕೆಯಾಗಿದ್ದು ಅನುಮಾನಕ್ಕೆ ಕಾರಣವಾಗಿದೆ.

ಕುತೂಹಲದ ವಿಚಾರವೆಂದರೆ, ಟೆಂಪಲ್ ಎಂಟರ್'ಪ್ರೈಸ್ ಸಂಸ್ಥೆಯ ವ್ಯವಹಾರವು 80 ಕೋಟಿಗೆ ಜಂಪ್ ಆದರೂ 2016ರಲ್ಲಿ ಸಂಸ್ಥೆಯನ್ನು ಮುಚ್ಚಲಾಯಿತು. ವ್ಯವಹಾರದಲ್ಲಿ ನಷ್ಟವಾದ್ದರಿಂದ ಸಂಸ್ಥೆಯನ್ನು ಮುಚ್ಚಲಾಯಿತಂತೆ.

Follow Us:
Download App:
  • android
  • ios