ಮೂಲ ಕಾಂಗ್ರೆಸಿಗರಾದ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಅವರನ್ನೂ ಯಾವ ಕಾಂಗ್ರೆಸಿಗರೂ ಕೂಡ ಸಂಪರ್ಕಿಸಿಲ್ಲ. ಅವರು ಬ್ಲಾಕ್ ಮೇಲೆ ತಂತ್ರದ ಮೊರೆ ಹೋಗಿರಬಹುದೆಂದು ಸಚಿವ ಯುಟಿ ಖಾದರ್ ಹೇಳಿದ್ದಾರೆ. 

ಬೆಳಗಾವಿ [ಜು.05] : ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನಿಡಿದ್ದರೂ ಅವರೇ ನಮ್ಮ ನಾಯಕರು ಎಂದು ಸಚಿವ ಯು.ಟಿ ಖಾದರ್ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಬೆಳಗಾವಿಯಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಖಾದರ್, ರಾಜೀನಾಮೆ ಬಗ್ಗೆ ರಾಹುಲ್ ಗಾಂಧಿ ದೃಢವಾದ ನಿರ್ಧಾರ ತೆಗೆದು ಕೊಂಡಿರುವುದು ನಮಗೆ ದುಃಖದ ಸಂಗತಿ. ಅವರು ರಾಜೀನಾಮೆ ನೀಡಿದರೂ ಪಕ್ಷ ಸಂಘಟನೆಯಲ್ಲಿ ಓರ್ವ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಅವರ ನೇತೃತ್ವದಲ್ಲಿ ಪಕ್ಷ ಮುನ್ನಡೆಯಲಿದೆ ಎಂದರು. 

ಇನ್ನು ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಗಾಳಿ ಬೀಸುತ್ತಿದ್ದು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಸಮಸ್ಯೆಯಾಗದು. ಇನ್ನೂ ನಾಲ್ಕು ವರ್ಷ ಸುಭದ್ರವಾಗಿರುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕೈ ಅತೃಪ್ತ ಶಾಸಕ ಎಂದೇ ಗುರುತಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಅದಕ್ಕೂ ಒಂದು ಪದ್ಧತಿ ಇದೆ. ಅದೇ ರೀತಿಯಲ್ಲಿಯೇ ನಡೆಯಬೇಕು. ಆದರೆ ಗವರ್ನರ್ ಬಳಿಕ ತನ್ನ ರಾಜೀನಾಮೆ ನೀಡಿದ್ದಾರೆ. ಹೀಗೆ ಮಾಡುವ ಮೂಲಕ ಸರ್ಕಾರಕ್ಕೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೇನೋ ? ಜಾರಕಿಹೊಳಿ ಮೂಲತಃ ಕಾಂಗ್ರೆಸ್, ಆದರೆ ಅವರನ್ನು ಇಲ್ಲಿಯವರೆಗೂ ಯಾವ ಕಾಂಗ್ರೆಸ್ ನಾಯಕರೂ ಕೂಡ ಸಂಪರ್ಕ ಮಾಡಿಲ್ಲ ಎಂದು ಖಾದರ್ ಹೇಳಿದರು. 

ಶೋಭಾ ಕರಂದ್ಲಾಜೆ ವಿರುದ್ಧ ವಾಗ್ದಾಳಿ :  ಇನ್ನು ಶೋಭಾ ಕರಂದ್ಲಾಜೆ ಮಂಗಳೂರು ಅಭಿವೃದ್ಧಿಗೆ ಪೂರಕವಾದ ಸಲಹೆ ನೀಡಿದಲ್ಲಿ ಸ್ವಾಗತ. ಆದರೆ ಯಾವುದೋ ಪ್ರಕರಣ ಇಟ್ಟುಕೊಂಡು ಆರೋಪ ಮಾಡುವುದು ಸರಿಯಲ್ಲ. ಪ್ರತಿಯೊಂದಕ್ಕೂ ಆರೋಪ ಮಾಡುವ ಅವರು ಗೊಂದಲದ ಹೇಳಿಕೆ ನೀಡುತ್ತಾರೆ. ಉಡುಪಿ ಜನ ಶೋಭಾ ನೋಡಿ ಮತ ನೀಡಿಲ್ಲ.ಮೋದಿ ನೋಡಿ ವೋಟ್ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.