2019ರ ಲೋಕಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಗೇರದಂತೆ ಬಿಜೆಪಿಯನ್ನು ಕಟ್ಟಿಹಾಕುವ ಯತ್ನದಲ್ಲಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ಈ ನಿಟ್ಟಿನಲ್ಲಿ ಸಂಯುಕ್ತ ರಂಗ ಸ್ಥಾಪನೆಗಾಗಿ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ : 2019ರ ಲೋಕಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಗೇರದಂತೆ ಬಿಜೆಪಿಯನ್ನು ಕಟ್ಟಿಹಾಕುವ ಯತ್ನದಲ್ಲಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ಈ ನಿಟ್ಟಿನಲ್ಲಿ ಸಂಯುಕ್ತ ರಂಗ ಸ್ಥಾಪನೆಗಾಗಿ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Add Asianetnews Kannada as a Preferred SourcegooglePreferred

ಬುಧವಾರವಷ್ಟೇ ಹೊರಬಿದ್ದ ಉತ್ತರ ಪ್ರದೇಶ ಮತ್ತು ಬಿಹಾರ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಬೆನ್ನಲ್ಲೇ, ಬುಧವಾರ ರಾತ್ರಿಯೇ ಶರದ್‌ ಪವಾರ್‌ ಅವರನ್ನು ರಾಹುಲ್‌ ಗಾಂಧಿ ಅವರು ಭೇಟಿ ಮಾಡಿದ್ದಾರೆ.

ಈ ಉಭಯ ನಾಯಕರ ಭೇಟಿ ಸಂದರ್ಭದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಸರಿ(ಬಿಜೆಪಿ) ಪಕ್ಷದ ಗೆಲುವಿನ ನಾಗಾಲೋಟವನ್ನು ತಡೆಯಲು ಪ್ರತಿಪಕ್ಷಗಳ ಜಂಟಿ ಕೂಟ ರಚನೆ ಕುರಿತು ಚರ್ಚಿಸಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಶೀಘ್ರ ಮಮತಾ ಭೇಟಿ: ಬಿಜೆಪಿ ವಿರುದ್ಧ ಮೊದಲಿನಿಂದಲೂ ಏರು ಧ್ವನಿಯಲ್ಲೇ ಮಾತನಾಡುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರನ್ನು ರಾಹುಲ್‌ ಶೀಘ್ರವೇ ಭೇಟಿ ಮಾಡಲಿದ್ದು, ಮಾ.28ರಂದು ಶರದ್‌ ಪವಾರ್‌ ಏರ್ಪಡಿಸಲಿರುವ ಪ್ರತಿಪಕ್ಷಗಳ ಜಂಟಿ ಕೂಟಕ್ಕೆ ಬ್ಯಾನರ್ಜಿ ಹಾಜರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ನಡುವೆ, ಬಿಎಸ್‌ಪಿ ಸಂಸ್ಥಾಪಕ ಕಾನ್ಶೀ ರಾಮ್‌ ಅವರನ್ನು ಕೊಂಡಾಡಿರುವ ರಾಹುಲ್‌ ಗಾಂಧಿ, ತುಳಿತಕ್ಕೊಳಗಾದ ಸಮುದಾಯ ಮತ್ತು ಕೆಳ ಜಾತಿ ಸಮುದಾಯವರನ್ನು ರಾಜಕೀಯದ ಮುಖ್ಯವಾಹಿನಿಗೆ ಕರೆತಂದ ಕೀರ್ತಿ ಕಾನ್ಶೀ ರಾಮ್‌ ಅವರಿಗೆ ಸಲ್ಲಬೇಕು. ಕಾನ್ಶೀ ರಾಮ್‌ ಸಾಮಾಜಿಕ ಸುಧಾರಕ ಎಂದು ರಾಹುಲ್‌ ಗಾಂಧಿ ಶ್ಲಾಘಿಸಿದ್ದಾರೆ.