ರಾಯಚೂರು ಬಿಇ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು| ಸಾವಿನ ಬೆನ್ನಲ್ಲೇ ಜೋರಾಯ್ತು ನ್ಯಾಯದ ಕೂಗು| ಮಗಳಿಗೆ ನ್ಯಾಯ ದೊರಕಿಸಿ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ತಾಯಿ

ರಾಯಚೂರು[ಏ.19]: ರಾಯಚೂರು ಬಿಇ ವಿದ್ಯಾರ್ಥಿನಿ ಮಧು ಅನುಮಾನಾಸ್ಪದ ಸಾವು ಪ್ರಕರಣ ಹೊಸ ಟ್ವಿಸ್ಟ್ ಪಡೆದಿದೆ. ವಿದ್ಯಾರ್ಥಿನಿ ಸಾವಿನ ಕುರಿತಾಗಿ ಹಲವಾರು ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಆಕೆಯ ಸಾವಿನ ತನಿಖೆ ನಡೆದಸಿ ನ್ಯಾಯ ಒದಗಿಸಿಕೊಡಬೇಕೆಂಬ ಕೂಗು ಜೋರಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"

ಒಂದೆಡೆ ತಾಯಿ ತನ್ನ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಾಯಿ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿದ್ಯಾರ್ಥಿನಿಯ ಸ್ನೇಹಿತ ಸುದರ್ಶನ ಯಾದವ್ ಎಂಬಾತನನ್ನು ಬಂಧಿಸಿದ್ದಾರೆ.