ದೀಪಾವಳಿಗೆ ರೈಲ್ವೆ ಇಲಾಖೆ ಭರ್ಜರಿ ಗುಡ್ ನ್ಯೂಸ್ ನೀಡುತ್ತಿದೆ. ಹೆಚ್ಚುವರಿಯಾಗಿ ಜನರು ಈ ಸಂದರ್ಭದಲ್ಲಿ ಪ್ರಯಾಣ ಮಾಡುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ರೈಲು ಬಿಡಲು ನಿರ್ಧರಿಸಿದೆ. 

ನವದೆಹಲಿ : ಭಾರತೀಯ ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದೆ. ದೀಪಾವಳಿಯ ಈ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆಯು ಹೆಚ್ಚಳವಾಗುವ ಕಾರಣ ಹೆಚ್ಚುವರಿ ರೈಲು ಬಿಡಲು ತೀರ್ಮಾನ ಮಾಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉತ್ತರ ವಲಯದ ರೈಲ್ವೆಯು ಹೆಚ್ಚುವರಿ ರೈಲು ಸೇವೆಯನ್ನು ನೀಡಲು ನಿರ್ಧರಿಸಿದೆ. 

ನವೆಂಬರ್ 7, 14, 21 ರಂದು ವಿಶೇಷ ರೈಲು ಪ್ರಯಾಣಿಸಲಿದೆ. ಒಟ್ಟು 19 ಬೋಗಿಗಳನ್ನು ಈ ವಿಶೇಷ ರೈಲು ಹೊಂದಿದ್ದು, ಲೋಕಮಾನ್ಯ ತಿಲಕ್ ಟರ್ಮಿನಲ್ ನಿಂದ ಮಂಡುವಾಡಿಯ ಪ್ರದೇಶದಲ್ಲಿ ಪ್ರಯಾಣಿಸುತ್ತದೆ. 

ಅಲ್ಲದೇ ದೀಪಾವಳಿ ಸಂದರ್ಭದಲ್ಲಿ ರೈಲ್ವೆ ಇಲಾಖೆ ತನ್ನ ಟಿಕೆಟ್ ದರದಲ್ಲಿಯೂ ಕೂಡ ಹೆಚ್ಚುವರಿಯಾಗಿ ಡಿಸ್ಕೌಂಟ್ ನೀಡುತ್ತಿದೆ.