, ಸ್ಟೀಲ್ ಫ್ಲೈಓವರ್ ನಿರ್ಮಾಣ ವಿಚಾರದಲ್ಲಿ ಸರ್ಕಾರ ಯಾವುದೇ ನಿಯಮಗಳನ್ನು ಪಾಲಿಸುತ್ತಿಲ್ಲ. ತನ್ನ ಸ್ವಂತ ಲಾಭಕ್ಕಾಗಿ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ಹೊರಟಿದೆ

ಬೆಂಗಳೂರು(ಫೆ.17): ಮೇಕ್ರಿ ಸರ್ಕಲ್ ಬಳಿ ರಾಜ್ಯ ಸರ್ಕಾರ ನಿರ್ಮಾಣ ಮಾಡಲು ಹೊರಟಿರುವ ಸ್ಟೀಲ್ ಫ್ಲೈಓವರ್ ಅಕ್ರಮದಿಂದ ಕೂಡಿದ್ದು, ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಲೋಕಾಯುಕ್ತ ನ್ಯಾಯಮೂರ್ತಿಯವರಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮನವಿ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಲೋಕಾಯುಕ್ತ ನ್ಯಾಯಮೂರ್ತಿಗಳಾದ ವಿಶ್ವನಾಥ್ ಶೆಟ್ಟಿ ಅವರನ್ನು ಭೇಟಿ ಮಾಡಿದ ಸಂಸದರು, ಸ್ಟೀಲ್ ಫ್ಲೈಓವರ್ ನಿರ್ಮಾಣ ವಿಚಾರದಲ್ಲಿ ಸರ್ಕಾರ ಯಾವುದೇ ನಿಯಮಗಳನ್ನು ಪಾಲಿಸುತ್ತಿಲ್ಲ. ತನ್ನ ಸ್ವಂತ ಲಾಭಕ್ಕಾಗಿ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ಹೊರಟಿದ್ದು, ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.