ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಸ್ಥಳೀಯ ಶಾಸಕ ವಿಜಯಕುಮಾರ್, ಸ್ಥಳೀಯ ಕಾರ್ಪೊರೇಟರ್ ಎನ್ ನಾಗರಾಜು ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

ಬೆಂಗಳೂರು(ಫೆ.12): ಎಸ್​ಎಸ್​ಎಲ್​ಸಿ ಪರೀಕ್ಷೆ ಹತ್ತಿರವಾಗ್ತಿದೆ. ಹೀಗಾಗಿ ಪ್ರತೀ ವರ್ಷವೂ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಜಯನಗರ ಶೈಕ್ಷಣಿಕ ಸಮಿತಿ ಉಚಿತ ತರಬೇತಿಯನ್ನು ನೀಡ್ತಿದೆ. ಕಳೆದ ಎಂಟು ವರ್ಷದಿಂದ ಉಚಿತ ತರಬೇತಿ ನೀಡುತ್ತಿರುವ ಸಮಿತಿಯ ಈ ವರ್ಷದ ಸಮಾರೋಪ ಸಮಾರಂಭ ಇಂದು ನಡೆಯಿತು. ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಸ್ಥಳೀಯ ಶಾಸಕ ವಿಜಯಕುಮಾರ್, ಸ್ಥಳೀಯ ಕಾರ್ಪೊರೇಟರ್ ಎನ್ ನಾಗರಾಜು ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು. ಇದೇ ವೇಳೆ ಮಾತನಾಡಿದ ರಾಜೀವ್ ಚಂದ್ರಶೇಖರ್. ಎಸ್​ಎಸ್​ಎಲ್​ಸಿ ನಿಮ್ಮ ಭವಿಷ್ಯವನ್ನು ನಿರ್ಧರಿಸುವ ಘಟ್ಟ, ಹೀಗಾಗಿ ಹೆಚ್ಚು ಪರಿಶ್ರಮದಿಂದ ಉತ್ತಮ ಅಂಕ ಗಳಿಸಿ ಉನ್ನತ ಹಂತಕ್ಕೇರಬೇಕು. ಸಾಮಾಜಿಕ ಮಾಧ್ಯಮಗಳಿಂದ ದೂರವುಳಿದು ಪರೀಕ್ಷೆಗೆ ತಯಾರಿ ನಡೆಸಿ. ಯಾವುದು ಕಷ್ಟವಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred